ಗುಂಡ್ಲುಪೇಟೆ: ಲಾರಿಯೊಂದು ಡಿಕ್ಕಿ ಹೊಡೆದು ಭಾರೀ ಗಾತ್ರದ ಹೆಣ್ಣಾನೆ ಮೃತಪಟ್ಟ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮದ್ದೂರು ವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ತಮಿಳುನಾಡು ಮೂಲದ ಲಾರಿಯೊಂದು ಮೈಸೂರು ಕಡೆ ಬರುವಾಗ ಅಡ್ಡ ಬಂದ ಸುಮಾರು ೩೫ ವರ್ಷದ ಆನೆಗೆ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಕಾಡಾನೆ ಸ್ಥಳದಲ್ಲೇ ಮೃತಪಟ್ಟಿದೆ. ಈ ರೀತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ ಮೃತಪಟ್ಟಿರುವುದು ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲು. ತಮಿಳುನಾಡು ಮೂಲದ ಲಾರಿ ವಶಕ್ಕೆ ಪಡೆಯಲಾಗಿದೆ. ರಾತ್ರಿ ೯ಕ್ಕೆ ಗೇಟ್ ಬಂದಾಗುವ ಆತಂಕದಲ್ಲಿ ಚಾಲಕರು ಜೋರಾಗಿ ವಾಹನ ಓಡಿಸುವುದರಿಂದ ಇಂತಹ ಅನಾಹುತ ಆಗುತ್ತಿದ್ದು, ಅಲ್ಲಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವ ಒತ್ತಾಯ ಕೇಳಿ ಬಂದಿದೆ.
ಘಟನೆ ಸಂಬಂಧ ಮೊಕದ್ದಮೆ ದಾಖಲಿಸಲಾಗುತ್ತಿದೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಬಂಡೀಪುರ ನಿರ್ದೇಶಕ ಡಾ.ಪಿ.ರಮೇಶಕುಮಾರ್ ಆಂದೋಲನಕ್ಕೆ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…