BREAKING NEWS

ಬೆಂಗಳೂರು ಬಂದ್| ಪ್ರತಿಭಟನಾಕಾರರನ್ನು ಹತ್ತಿಕ್ಕಲ್ಲ, ಅಭಿನಂದಿಸುತ್ತೇನೆ: ಡಿಕೆ ಶಿವಕುಮಾರ್‌

ಬೆಂಗಳೂರು: ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದಿಲ್ಲ, ಬದಲಾಗಿ ಅಭಿನಂದನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು,‌ ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ನಾಗರಿಕರು ಹಾಗೂ ಸಂಘಟನೆಗಳಿಗೆ ಅಭಿನಂದಿಸುವೆ. ಶಾಂತಿಯುತವಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದರು.

ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ನೀರಿನ ಮಟ್ಟ ಚೆಕ್ ಮಾಡ್ತಿದ್ದೇನೆ. ನಮ್ಮ ಅಧಿಕಾರಿಗಳು ಏನು ಮಾಡ್ತಾರೆ ನೋಡೋಣ. 8 ರಿಂದ 10 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೀರಿನ ಮಟ್ಟದ ಲೆಕ್ಕ ಇದೆ, ಯಾರೂ ಸುಳ್ಳು ಹೇಳಲು ಆಗಲ್ಲ ಎಂದು ವಿವರಿಸಿದರು.

ಎಷ್ಟು ನೀರು ಬರುತ್ತಿದೆ ಎಂದು ದಾಖಲೆ ಇದೆ. ಬಿಳಿಗೊಂಡ್ಲು ಡ್ಯಾಮ್ ನಲ್ಲಿ ನೀರಿನ ಮಟ್ಟ ದಾಖಲಾಗುತ್ತದೆ. ಸುಳ್ಳು ಹೇಳಲು ಆಗಲ್ಲ, ಟೆಕ್ನಿಕಲ್ ಕಮಿಟಿ ಅವರ ಪಾಯಿಂಟ್ ಮುಂದಿಡುತ್ತಾರೆ ಎಂದರು.

5 ಸಾವಿರ ಕೂಸೆಕ್ಸ್ ನೀರು ಬಿಡಲು ಆಗಲ್ಲ ಇನ್ನೂ 12,500 ಸಾವಿರ ಕೂಸೆಕ್ಸ್ ನೀರು ಬಿಡಲು ಆಗುತ್ತಾ? ಅವರು ಎಷ್ಟೇ ಬೇಡಿಕೆ ಇಟ್ಟರೂ ನೀರು ಬಿಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅನೇಕ ಜಡ್ಜ್ ಮೆಂಟ್ ಗಳಿವೆ ಎಂದು ತಿಳಿಸಿದರು.

ಇದು ಸ್ಟಾಲಿನ್ ಬಾಡಿಗೆ ಸರ್ಕಾರ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ‌ಅವರ ತಂದೆಯವರು ಏನು ಹೇಳಿದ್ದಾರೆ. ಮೊದಲು ಅದನ್ನು ಅರ್ಥ ಮಾಡಿಕೊಳ್ಳಲಿ. ರಾಜಕಾರಣ ಬಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡಲಿ ಎಂದು ಡಿಕೆಶಿ ತಿರುಗೇಟು ನೀಡಿದರು.

5 ಮಂದಿ ತಜ್ಞರ ಸಮಿತಿ ರಚಿಸಿ, ರಾಜ್ಯದ ಕಾವೇರಿ ಜಲಾನಯನದ ಸ್ಥಿತಿಗತಿ ಅಧ್ಯಯಮ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಕಾವೇರಿ ವಿವಾದ ಪರಿಹರಿಸಬೇಕೆಂದು ಮಾಜಿ ಪ್ರಧಾನಿ ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

andolanait

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

9 mins ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

35 mins ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

1 hour ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

2 hours ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

2 hours ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

2 hours ago