ಬೆಂಗಳೂರು: ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದಿಲ್ಲ, ಬದಲಾಗಿ ಅಭಿನಂದನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ನಾಗರಿಕರು ಹಾಗೂ ಸಂಘಟನೆಗಳಿಗೆ ಅಭಿನಂದಿಸುವೆ. ಶಾಂತಿಯುತವಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದರು.
ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ನೀರಿನ ಮಟ್ಟ ಚೆಕ್ ಮಾಡ್ತಿದ್ದೇನೆ. ನಮ್ಮ ಅಧಿಕಾರಿಗಳು ಏನು ಮಾಡ್ತಾರೆ ನೋಡೋಣ. 8 ರಿಂದ 10 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೀರಿನ ಮಟ್ಟದ ಲೆಕ್ಕ ಇದೆ, ಯಾರೂ ಸುಳ್ಳು ಹೇಳಲು ಆಗಲ್ಲ ಎಂದು ವಿವರಿಸಿದರು.
ಎಷ್ಟು ನೀರು ಬರುತ್ತಿದೆ ಎಂದು ದಾಖಲೆ ಇದೆ. ಬಿಳಿಗೊಂಡ್ಲು ಡ್ಯಾಮ್ ನಲ್ಲಿ ನೀರಿನ ಮಟ್ಟ ದಾಖಲಾಗುತ್ತದೆ. ಸುಳ್ಳು ಹೇಳಲು ಆಗಲ್ಲ, ಟೆಕ್ನಿಕಲ್ ಕಮಿಟಿ ಅವರ ಪಾಯಿಂಟ್ ಮುಂದಿಡುತ್ತಾರೆ ಎಂದರು.
5 ಸಾವಿರ ಕೂಸೆಕ್ಸ್ ನೀರು ಬಿಡಲು ಆಗಲ್ಲ ಇನ್ನೂ 12,500 ಸಾವಿರ ಕೂಸೆಕ್ಸ್ ನೀರು ಬಿಡಲು ಆಗುತ್ತಾ? ಅವರು ಎಷ್ಟೇ ಬೇಡಿಕೆ ಇಟ್ಟರೂ ನೀರು ಬಿಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅನೇಕ ಜಡ್ಜ್ ಮೆಂಟ್ ಗಳಿವೆ ಎಂದು ತಿಳಿಸಿದರು.
ಇದು ಸ್ಟಾಲಿನ್ ಬಾಡಿಗೆ ಸರ್ಕಾರ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ಅವರ ತಂದೆಯವರು ಏನು ಹೇಳಿದ್ದಾರೆ. ಮೊದಲು ಅದನ್ನು ಅರ್ಥ ಮಾಡಿಕೊಳ್ಳಲಿ. ರಾಜಕಾರಣ ಬಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡಲಿ ಎಂದು ಡಿಕೆಶಿ ತಿರುಗೇಟು ನೀಡಿದರು.
5 ಮಂದಿ ತಜ್ಞರ ಸಮಿತಿ ರಚಿಸಿ, ರಾಜ್ಯದ ಕಾವೇರಿ ಜಲಾನಯನದ ಸ್ಥಿತಿಗತಿ ಅಧ್ಯಯಮ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಕಾವೇರಿ ವಿವಾದ ಪರಿಹರಿಸಬೇಕೆಂದು ಮಾಜಿ ಪ್ರಧಾನಿ ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…