BREAKING NEWS

ಬೆಂಗಳೂರು ಬಂದ್| ಪ್ರತಿಭಟನಾಕಾರರನ್ನು ಹತ್ತಿಕ್ಕಲ್ಲ, ಅಭಿನಂದಿಸುತ್ತೇನೆ: ಡಿಕೆ ಶಿವಕುಮಾರ್‌

ಬೆಂಗಳೂರು: ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದಿಲ್ಲ, ಬದಲಾಗಿ ಅಭಿನಂದನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು,‌ ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ನಾಗರಿಕರು ಹಾಗೂ ಸಂಘಟನೆಗಳಿಗೆ ಅಭಿನಂದಿಸುವೆ. ಶಾಂತಿಯುತವಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದರು.

ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ನೀರಿನ ಮಟ್ಟ ಚೆಕ್ ಮಾಡ್ತಿದ್ದೇನೆ. ನಮ್ಮ ಅಧಿಕಾರಿಗಳು ಏನು ಮಾಡ್ತಾರೆ ನೋಡೋಣ. 8 ರಿಂದ 10 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೀರಿನ ಮಟ್ಟದ ಲೆಕ್ಕ ಇದೆ, ಯಾರೂ ಸುಳ್ಳು ಹೇಳಲು ಆಗಲ್ಲ ಎಂದು ವಿವರಿಸಿದರು.

ಎಷ್ಟು ನೀರು ಬರುತ್ತಿದೆ ಎಂದು ದಾಖಲೆ ಇದೆ. ಬಿಳಿಗೊಂಡ್ಲು ಡ್ಯಾಮ್ ನಲ್ಲಿ ನೀರಿನ ಮಟ್ಟ ದಾಖಲಾಗುತ್ತದೆ. ಸುಳ್ಳು ಹೇಳಲು ಆಗಲ್ಲ, ಟೆಕ್ನಿಕಲ್ ಕಮಿಟಿ ಅವರ ಪಾಯಿಂಟ್ ಮುಂದಿಡುತ್ತಾರೆ ಎಂದರು.

5 ಸಾವಿರ ಕೂಸೆಕ್ಸ್ ನೀರು ಬಿಡಲು ಆಗಲ್ಲ ಇನ್ನೂ 12,500 ಸಾವಿರ ಕೂಸೆಕ್ಸ್ ನೀರು ಬಿಡಲು ಆಗುತ್ತಾ? ಅವರು ಎಷ್ಟೇ ಬೇಡಿಕೆ ಇಟ್ಟರೂ ನೀರು ಬಿಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅನೇಕ ಜಡ್ಜ್ ಮೆಂಟ್ ಗಳಿವೆ ಎಂದು ತಿಳಿಸಿದರು.

ಇದು ಸ್ಟಾಲಿನ್ ಬಾಡಿಗೆ ಸರ್ಕಾರ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ‌ಅವರ ತಂದೆಯವರು ಏನು ಹೇಳಿದ್ದಾರೆ. ಮೊದಲು ಅದನ್ನು ಅರ್ಥ ಮಾಡಿಕೊಳ್ಳಲಿ. ರಾಜಕಾರಣ ಬಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡಲಿ ಎಂದು ಡಿಕೆಶಿ ತಿರುಗೇಟು ನೀಡಿದರು.

5 ಮಂದಿ ತಜ್ಞರ ಸಮಿತಿ ರಚಿಸಿ, ರಾಜ್ಯದ ಕಾವೇರಿ ಜಲಾನಯನದ ಸ್ಥಿತಿಗತಿ ಅಧ್ಯಯಮ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಕಾವೇರಿ ವಿವಾದ ಪರಿಹರಿಸಬೇಕೆಂದು ಮಾಜಿ ಪ್ರಧಾನಿ ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

andolanait

Recent Posts

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

22 mins ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

1 hour ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

2 hours ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

2 hours ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

3 hours ago