ಬೆಂಗಳೂರು: ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದಿಲ್ಲ, ಬದಲಾಗಿ ಅಭಿನಂದನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ನಾಗರಿಕರು ಹಾಗೂ ಸಂಘಟನೆಗಳಿಗೆ ಅಭಿನಂದಿಸುವೆ. ಶಾಂತಿಯುತವಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದರು.
ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ನೀರಿನ ಮಟ್ಟ ಚೆಕ್ ಮಾಡ್ತಿದ್ದೇನೆ. ನಮ್ಮ ಅಧಿಕಾರಿಗಳು ಏನು ಮಾಡ್ತಾರೆ ನೋಡೋಣ. 8 ರಿಂದ 10 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೀರಿನ ಮಟ್ಟದ ಲೆಕ್ಕ ಇದೆ, ಯಾರೂ ಸುಳ್ಳು ಹೇಳಲು ಆಗಲ್ಲ ಎಂದು ವಿವರಿಸಿದರು.
ಎಷ್ಟು ನೀರು ಬರುತ್ತಿದೆ ಎಂದು ದಾಖಲೆ ಇದೆ. ಬಿಳಿಗೊಂಡ್ಲು ಡ್ಯಾಮ್ ನಲ್ಲಿ ನೀರಿನ ಮಟ್ಟ ದಾಖಲಾಗುತ್ತದೆ. ಸುಳ್ಳು ಹೇಳಲು ಆಗಲ್ಲ, ಟೆಕ್ನಿಕಲ್ ಕಮಿಟಿ ಅವರ ಪಾಯಿಂಟ್ ಮುಂದಿಡುತ್ತಾರೆ ಎಂದರು.
5 ಸಾವಿರ ಕೂಸೆಕ್ಸ್ ನೀರು ಬಿಡಲು ಆಗಲ್ಲ ಇನ್ನೂ 12,500 ಸಾವಿರ ಕೂಸೆಕ್ಸ್ ನೀರು ಬಿಡಲು ಆಗುತ್ತಾ? ಅವರು ಎಷ್ಟೇ ಬೇಡಿಕೆ ಇಟ್ಟರೂ ನೀರು ಬಿಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅನೇಕ ಜಡ್ಜ್ ಮೆಂಟ್ ಗಳಿವೆ ಎಂದು ತಿಳಿಸಿದರು.
ಇದು ಸ್ಟಾಲಿನ್ ಬಾಡಿಗೆ ಸರ್ಕಾರ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ಅವರ ತಂದೆಯವರು ಏನು ಹೇಳಿದ್ದಾರೆ. ಮೊದಲು ಅದನ್ನು ಅರ್ಥ ಮಾಡಿಕೊಳ್ಳಲಿ. ರಾಜಕಾರಣ ಬಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡಲಿ ಎಂದು ಡಿಕೆಶಿ ತಿರುಗೇಟು ನೀಡಿದರು.
5 ಮಂದಿ ತಜ್ಞರ ಸಮಿತಿ ರಚಿಸಿ, ರಾಜ್ಯದ ಕಾವೇರಿ ಜಲಾನಯನದ ಸ್ಥಿತಿಗತಿ ಅಧ್ಯಯಮ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಕಾವೇರಿ ವಿವಾದ ಪರಿಹರಿಸಬೇಕೆಂದು ಮಾಜಿ ಪ್ರಧಾನಿ ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…