BREAKING NEWS

ಬೆಂಗಳೂರು ಬಂದ್| ಪ್ರತಿಭಟನಾಕಾರರನ್ನು ಹತ್ತಿಕ್ಕಲ್ಲ, ಅಭಿನಂದಿಸುತ್ತೇನೆ: ಡಿಕೆ ಶಿವಕುಮಾರ್‌

ಬೆಂಗಳೂರು: ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದಿಲ್ಲ, ಬದಲಾಗಿ ಅಭಿನಂದನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು,‌ ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ನಾಗರಿಕರು ಹಾಗೂ ಸಂಘಟನೆಗಳಿಗೆ ಅಭಿನಂದಿಸುವೆ. ಶಾಂತಿಯುತವಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದರು.

ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ನೀರಿನ ಮಟ್ಟ ಚೆಕ್ ಮಾಡ್ತಿದ್ದೇನೆ. ನಮ್ಮ ಅಧಿಕಾರಿಗಳು ಏನು ಮಾಡ್ತಾರೆ ನೋಡೋಣ. 8 ರಿಂದ 10 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೀರಿನ ಮಟ್ಟದ ಲೆಕ್ಕ ಇದೆ, ಯಾರೂ ಸುಳ್ಳು ಹೇಳಲು ಆಗಲ್ಲ ಎಂದು ವಿವರಿಸಿದರು.

ಎಷ್ಟು ನೀರು ಬರುತ್ತಿದೆ ಎಂದು ದಾಖಲೆ ಇದೆ. ಬಿಳಿಗೊಂಡ್ಲು ಡ್ಯಾಮ್ ನಲ್ಲಿ ನೀರಿನ ಮಟ್ಟ ದಾಖಲಾಗುತ್ತದೆ. ಸುಳ್ಳು ಹೇಳಲು ಆಗಲ್ಲ, ಟೆಕ್ನಿಕಲ್ ಕಮಿಟಿ ಅವರ ಪಾಯಿಂಟ್ ಮುಂದಿಡುತ್ತಾರೆ ಎಂದರು.

5 ಸಾವಿರ ಕೂಸೆಕ್ಸ್ ನೀರು ಬಿಡಲು ಆಗಲ್ಲ ಇನ್ನೂ 12,500 ಸಾವಿರ ಕೂಸೆಕ್ಸ್ ನೀರು ಬಿಡಲು ಆಗುತ್ತಾ? ಅವರು ಎಷ್ಟೇ ಬೇಡಿಕೆ ಇಟ್ಟರೂ ನೀರು ಬಿಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅನೇಕ ಜಡ್ಜ್ ಮೆಂಟ್ ಗಳಿವೆ ಎಂದು ತಿಳಿಸಿದರು.

ಇದು ಸ್ಟಾಲಿನ್ ಬಾಡಿಗೆ ಸರ್ಕಾರ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ‌ಅವರ ತಂದೆಯವರು ಏನು ಹೇಳಿದ್ದಾರೆ. ಮೊದಲು ಅದನ್ನು ಅರ್ಥ ಮಾಡಿಕೊಳ್ಳಲಿ. ರಾಜಕಾರಣ ಬಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡಲಿ ಎಂದು ಡಿಕೆಶಿ ತಿರುಗೇಟು ನೀಡಿದರು.

5 ಮಂದಿ ತಜ್ಞರ ಸಮಿತಿ ರಚಿಸಿ, ರಾಜ್ಯದ ಕಾವೇರಿ ಜಲಾನಯನದ ಸ್ಥಿತಿಗತಿ ಅಧ್ಯಯಮ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಕಾವೇರಿ ವಿವಾದ ಪರಿಹರಿಸಬೇಕೆಂದು ಮಾಜಿ ಪ್ರಧಾನಿ ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

andolanait

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

2 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

3 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

3 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

12 hours ago