ಮೈಸೂರು : ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳವನ್ನು ತಡೆಹಿಡಿಯಲಾಗಿದೆ.ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ.ಸೋಷಿಯಲ್ ಮೀಡಿಯಾ ಮೂಲಕ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.ಇಂದಿನಿಂದ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರವನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿತ್ತು.ಆದರೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತನ್ನ ಆದೇಶವನ್ನ ವಾಪಸ್ ಪಡೆದಿದೆ.
ಈ ವಿಡಿಯೋ ಬಗ್ಗೆ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದ ಸಂಸದ ಪ್ರತಾಪ್ ಸಿಂಹ ಮಾರ್ಚ್ 14 ನೇ ತಾರೀಖು ಟೋಲ್ ದರ ಹೆಚ್ಚಳ ಮಾಡಿದಾಗ ಬೆಂಗಳೂರಿನಿಂದ ನಿಡಘಟ್ಟ 135 ರೂಪಾಯಿ ಟೋಲ್ ಧರ ನಿಗಧಿ ಪಡಿಸಿದ್ದು,ಅದನ್ನು ಇಂದಿನಿಂದ ಅನ್ವಯವಾಗುವ ರೀತಿಯಲ್ಲಿ 165 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.ಇಡೀ ದೇಶಾದ್ಯಂತ ಇರುವ ಎಲ್ಲಾ ಟೋಲ್ ರಸ್ತೆಗಳಲ್ಲಿ ಶೇ.7 ರಿಂದ ಒಂದಷ್ಟು ನಿಖರ ಬೆಲೆಯವರೆಗೆ ಹೆಚ್ಚಳ ಮಾಡಲಾಗಿದೆ.ಇದು ಕೇವಲ ಮೈಸೂರು – ಬೆಂಗಳೂರು ಎಕ್ಸ್ ಪ್ರೆಸ್ವೇ ಗೆ ಮಾತ್ರ ಅನ್ವಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.ಆದರೆ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ವೇ ನಲ್ಲಿ ಇನ್ನೂ ಕೆಲವು ಕಾಮಗಾರಿಗಳು ನಡೆಯುತ್ತಿರುವುದರಿಂದ ಈ ಎಕ್ಸ್ ಪ್ರೆಸ್ವೇಗೆ ಟೋಲ್ ದರ ಹೆಚ್ಚಳವಾಗುವುದು ಬೇಡ,ತಾತ್ಕಾಲಿಕವಾಗಿ ತಡೆಹಿಡಿಯಿರಿ ಎಂದು ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದೆ ಎಂದಿದ್ದರು.
https://twitter.com/mepratap/status/1642016891060494338?s=20
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…