BREAKING NEWS

ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ನಿರ್ಬಂಧ: ಟ್ವಿಟರ್‌

ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್‌ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಟ್ವಿಟರ್‌ ತಾಣದಲ್ಲಿ ಗೋಚರಿಸದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಕಂಪನಿಯು ತನ್ನ ಪರಿಷ್ಕೃತ ನೀತಿಯಲ್ಲಿ ಹೇಳಿದೆ.

ಆರಂಭದಲ್ಲಿ ದ್ವೇಷಪೂರಿತ ನಡವಳಿಕೆಯಂಥ ನಿಯಮಗಳ ಉಲ್ಲಂಘನೆಯ ಟ್ವೀಟ್‌ಗಳಿಗೆ ವಿಜಿಬಿಲಿಟಿ ಫಿಲ್ಟರ್‌ (ಗೋಚರ ಸೋಸುಕ) ಅಳವಡಿಸಿ, ನಂತರ ಅದನ್ನು ಇತರ ಡೊಮೇನ್‌ಗಳಿಗೂ ವಿಸ್ತರಿಸಲಿದೆ. ಟ್ವಿಟರ್ ಬಳಕೆದಾರರಿಗೆ ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಸೆನ್ಸಾರ್‌ಶಿಪ್‌ ಭಯವಿಲ್ಲದೆ ವ್ಯಕ್ತಪಡಿಸುವ ಹಕ್ಕಿದೆ ಎಂದು ಸಂಸ್ಥೆ ತಿಳಿಸಿದೆ.

‘ನಿಯಮಗಳನ್ನು ಉಲ್ಲಂಘಿಸುವ ವಿಷಯದಿಂದ ಬಳಕೆದಾರರನ್ನು ನಮ್ಮ ಜಾಲತಾಣದಲ್ಲಿ ಸುರಕ್ಷಿತವಾಗಿರಿಸುವುದು ನಮ್ಮ ಜವಾಬ್ದಾರಿ ಮತ್ತು ನಂಬಿಕೆ. ಈ ನಂಬಿಕೆಗಳು ವಾಕ್ ಸ್ವಾತಂತ್ರ್ಯದ ಅಡಿಪಾಯವಾಗಿದೆ. ಹಾಗಂಥ, ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ಮುಕ್ತವಾಗಿ ಬಳಕೆದಾರರನ್ನು ತಲುಪುವ ಸ್ವಾತಂತ್ರ್ಯವಿದೆ ಎಂದಲ್ಲ. ನಮ್ಮ ನೀತಿಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಗೋಚರಿಸದಂತೆ, ಅವು ತಲುಪುವ ವ್ಯಾಪ್ತಿಯನ್ನು ನಿರ್ಬಂಧಿಸುವುದು ನಮ್ಮ ತತ್ವಾದರ್ಶವಾಗಿದೆ’ ಎಂದು ಸಂಸ್ಥೆ ಹೇಳಿದೆ.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

2 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

3 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

3 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

3 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

4 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

4 hours ago