ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್ಗಳು ಟ್ವಿಟರ್ ತಾಣದಲ್ಲಿ ಗೋಚರಿಸದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಕಂಪನಿಯು ತನ್ನ ಪರಿಷ್ಕೃತ ನೀತಿಯಲ್ಲಿ ಹೇಳಿದೆ.
ಆರಂಭದಲ್ಲಿ ದ್ವೇಷಪೂರಿತ ನಡವಳಿಕೆಯಂಥ ನಿಯಮಗಳ ಉಲ್ಲಂಘನೆಯ ಟ್ವೀಟ್ಗಳಿಗೆ ವಿಜಿಬಿಲಿಟಿ ಫಿಲ್ಟರ್ (ಗೋಚರ ಸೋಸುಕ) ಅಳವಡಿಸಿ, ನಂತರ ಅದನ್ನು ಇತರ ಡೊಮೇನ್ಗಳಿಗೂ ವಿಸ್ತರಿಸಲಿದೆ. ಟ್ವಿಟರ್ ಬಳಕೆದಾರರಿಗೆ ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಸೆನ್ಸಾರ್ಶಿಪ್ ಭಯವಿಲ್ಲದೆ ವ್ಯಕ್ತಪಡಿಸುವ ಹಕ್ಕಿದೆ ಎಂದು ಸಂಸ್ಥೆ ತಿಳಿಸಿದೆ.
‘ನಿಯಮಗಳನ್ನು ಉಲ್ಲಂಘಿಸುವ ವಿಷಯದಿಂದ ಬಳಕೆದಾರರನ್ನು ನಮ್ಮ ಜಾಲತಾಣದಲ್ಲಿ ಸುರಕ್ಷಿತವಾಗಿರಿಸುವುದು ನಮ್ಮ ಜವಾಬ್ದಾರಿ ಮತ್ತು ನಂಬಿಕೆ. ಈ ನಂಬಿಕೆಗಳು ವಾಕ್ ಸ್ವಾತಂತ್ರ್ಯದ ಅಡಿಪಾಯವಾಗಿದೆ. ಹಾಗಂಥ, ನಿಯಮ ಉಲ್ಲಂಘಿಸಿದ ಟ್ವೀಟ್ಗಳಿಗೆ ಮುಕ್ತವಾಗಿ ಬಳಕೆದಾರರನ್ನು ತಲುಪುವ ಸ್ವಾತಂತ್ರ್ಯವಿದೆ ಎಂದಲ್ಲ. ನಮ್ಮ ನೀತಿಗಳನ್ನು ಉಲ್ಲಂಘಿಸುವ ಟ್ವೀಟ್ಗಳು ಗೋಚರಿಸದಂತೆ, ಅವು ತಲುಪುವ ವ್ಯಾಪ್ತಿಯನ್ನು ನಿರ್ಬಂಧಿಸುವುದು ನಮ್ಮ ತತ್ವಾದರ್ಶವಾಗಿದೆ’ ಎಂದು ಸಂಸ್ಥೆ ಹೇಳಿದೆ.
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…