BREAKING NEWS

ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ನಿರ್ಬಂಧ: ಟ್ವಿಟರ್‌

ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್‌ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಟ್ವಿಟರ್‌ ತಾಣದಲ್ಲಿ ಗೋಚರಿಸದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಕಂಪನಿಯು ತನ್ನ ಪರಿಷ್ಕೃತ ನೀತಿಯಲ್ಲಿ ಹೇಳಿದೆ.

ಆರಂಭದಲ್ಲಿ ದ್ವೇಷಪೂರಿತ ನಡವಳಿಕೆಯಂಥ ನಿಯಮಗಳ ಉಲ್ಲಂಘನೆಯ ಟ್ವೀಟ್‌ಗಳಿಗೆ ವಿಜಿಬಿಲಿಟಿ ಫಿಲ್ಟರ್‌ (ಗೋಚರ ಸೋಸುಕ) ಅಳವಡಿಸಿ, ನಂತರ ಅದನ್ನು ಇತರ ಡೊಮೇನ್‌ಗಳಿಗೂ ವಿಸ್ತರಿಸಲಿದೆ. ಟ್ವಿಟರ್ ಬಳಕೆದಾರರಿಗೆ ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಸೆನ್ಸಾರ್‌ಶಿಪ್‌ ಭಯವಿಲ್ಲದೆ ವ್ಯಕ್ತಪಡಿಸುವ ಹಕ್ಕಿದೆ ಎಂದು ಸಂಸ್ಥೆ ತಿಳಿಸಿದೆ.

‘ನಿಯಮಗಳನ್ನು ಉಲ್ಲಂಘಿಸುವ ವಿಷಯದಿಂದ ಬಳಕೆದಾರರನ್ನು ನಮ್ಮ ಜಾಲತಾಣದಲ್ಲಿ ಸುರಕ್ಷಿತವಾಗಿರಿಸುವುದು ನಮ್ಮ ಜವಾಬ್ದಾರಿ ಮತ್ತು ನಂಬಿಕೆ. ಈ ನಂಬಿಕೆಗಳು ವಾಕ್ ಸ್ವಾತಂತ್ರ್ಯದ ಅಡಿಪಾಯವಾಗಿದೆ. ಹಾಗಂಥ, ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ಮುಕ್ತವಾಗಿ ಬಳಕೆದಾರರನ್ನು ತಲುಪುವ ಸ್ವಾತಂತ್ರ್ಯವಿದೆ ಎಂದಲ್ಲ. ನಮ್ಮ ನೀತಿಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಗೋಚರಿಸದಂತೆ, ಅವು ತಲುಪುವ ವ್ಯಾಪ್ತಿಯನ್ನು ನಿರ್ಬಂಧಿಸುವುದು ನಮ್ಮ ತತ್ವಾದರ್ಶವಾಗಿದೆ’ ಎಂದು ಸಂಸ್ಥೆ ಹೇಳಿದೆ.

andolanait

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

7 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

26 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

49 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago