BREAKING NEWS

ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ನಿರ್ಬಂಧ: ಟ್ವಿಟರ್‌

ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್‌ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಟ್ವಿಟರ್‌ ತಾಣದಲ್ಲಿ ಗೋಚರಿಸದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಕಂಪನಿಯು ತನ್ನ ಪರಿಷ್ಕೃತ ನೀತಿಯಲ್ಲಿ ಹೇಳಿದೆ.

ಆರಂಭದಲ್ಲಿ ದ್ವೇಷಪೂರಿತ ನಡವಳಿಕೆಯಂಥ ನಿಯಮಗಳ ಉಲ್ಲಂಘನೆಯ ಟ್ವೀಟ್‌ಗಳಿಗೆ ವಿಜಿಬಿಲಿಟಿ ಫಿಲ್ಟರ್‌ (ಗೋಚರ ಸೋಸುಕ) ಅಳವಡಿಸಿ, ನಂತರ ಅದನ್ನು ಇತರ ಡೊಮೇನ್‌ಗಳಿಗೂ ವಿಸ್ತರಿಸಲಿದೆ. ಟ್ವಿಟರ್ ಬಳಕೆದಾರರಿಗೆ ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಸೆನ್ಸಾರ್‌ಶಿಪ್‌ ಭಯವಿಲ್ಲದೆ ವ್ಯಕ್ತಪಡಿಸುವ ಹಕ್ಕಿದೆ ಎಂದು ಸಂಸ್ಥೆ ತಿಳಿಸಿದೆ.

‘ನಿಯಮಗಳನ್ನು ಉಲ್ಲಂಘಿಸುವ ವಿಷಯದಿಂದ ಬಳಕೆದಾರರನ್ನು ನಮ್ಮ ಜಾಲತಾಣದಲ್ಲಿ ಸುರಕ್ಷಿತವಾಗಿರಿಸುವುದು ನಮ್ಮ ಜವಾಬ್ದಾರಿ ಮತ್ತು ನಂಬಿಕೆ. ಈ ನಂಬಿಕೆಗಳು ವಾಕ್ ಸ್ವಾತಂತ್ರ್ಯದ ಅಡಿಪಾಯವಾಗಿದೆ. ಹಾಗಂಥ, ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ಮುಕ್ತವಾಗಿ ಬಳಕೆದಾರರನ್ನು ತಲುಪುವ ಸ್ವಾತಂತ್ರ್ಯವಿದೆ ಎಂದಲ್ಲ. ನಮ್ಮ ನೀತಿಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಗೋಚರಿಸದಂತೆ, ಅವು ತಲುಪುವ ವ್ಯಾಪ್ತಿಯನ್ನು ನಿರ್ಬಂಧಿಸುವುದು ನಮ್ಮ ತತ್ವಾದರ್ಶವಾಗಿದೆ’ ಎಂದು ಸಂಸ್ಥೆ ಹೇಳಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago