BREAKING NEWS

ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ನಿರ್ಬಂಧ: ಟ್ವಿಟರ್‌

ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್‌ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಟ್ವಿಟರ್‌ ತಾಣದಲ್ಲಿ ಗೋಚರಿಸದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಕಂಪನಿಯು ತನ್ನ ಪರಿಷ್ಕೃತ ನೀತಿಯಲ್ಲಿ ಹೇಳಿದೆ.

ಆರಂಭದಲ್ಲಿ ದ್ವೇಷಪೂರಿತ ನಡವಳಿಕೆಯಂಥ ನಿಯಮಗಳ ಉಲ್ಲಂಘನೆಯ ಟ್ವೀಟ್‌ಗಳಿಗೆ ವಿಜಿಬಿಲಿಟಿ ಫಿಲ್ಟರ್‌ (ಗೋಚರ ಸೋಸುಕ) ಅಳವಡಿಸಿ, ನಂತರ ಅದನ್ನು ಇತರ ಡೊಮೇನ್‌ಗಳಿಗೂ ವಿಸ್ತರಿಸಲಿದೆ. ಟ್ವಿಟರ್ ಬಳಕೆದಾರರಿಗೆ ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಸೆನ್ಸಾರ್‌ಶಿಪ್‌ ಭಯವಿಲ್ಲದೆ ವ್ಯಕ್ತಪಡಿಸುವ ಹಕ್ಕಿದೆ ಎಂದು ಸಂಸ್ಥೆ ತಿಳಿಸಿದೆ.

‘ನಿಯಮಗಳನ್ನು ಉಲ್ಲಂಘಿಸುವ ವಿಷಯದಿಂದ ಬಳಕೆದಾರರನ್ನು ನಮ್ಮ ಜಾಲತಾಣದಲ್ಲಿ ಸುರಕ್ಷಿತವಾಗಿರಿಸುವುದು ನಮ್ಮ ಜವಾಬ್ದಾರಿ ಮತ್ತು ನಂಬಿಕೆ. ಈ ನಂಬಿಕೆಗಳು ವಾಕ್ ಸ್ವಾತಂತ್ರ್ಯದ ಅಡಿಪಾಯವಾಗಿದೆ. ಹಾಗಂಥ, ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ಮುಕ್ತವಾಗಿ ಬಳಕೆದಾರರನ್ನು ತಲುಪುವ ಸ್ವಾತಂತ್ರ್ಯವಿದೆ ಎಂದಲ್ಲ. ನಮ್ಮ ನೀತಿಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಗೋಚರಿಸದಂತೆ, ಅವು ತಲುಪುವ ವ್ಯಾಪ್ತಿಯನ್ನು ನಿರ್ಬಂಧಿಸುವುದು ನಮ್ಮ ತತ್ವಾದರ್ಶವಾಗಿದೆ’ ಎಂದು ಸಂಸ್ಥೆ ಹೇಳಿದೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

3 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago