ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್ಗಳು ಟ್ವಿಟರ್ ತಾಣದಲ್ಲಿ ಗೋಚರಿಸದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಕಂಪನಿಯು ತನ್ನ ಪರಿಷ್ಕೃತ ನೀತಿಯಲ್ಲಿ ಹೇಳಿದೆ.
ಆರಂಭದಲ್ಲಿ ದ್ವೇಷಪೂರಿತ ನಡವಳಿಕೆಯಂಥ ನಿಯಮಗಳ ಉಲ್ಲಂಘನೆಯ ಟ್ವೀಟ್ಗಳಿಗೆ ವಿಜಿಬಿಲಿಟಿ ಫಿಲ್ಟರ್ (ಗೋಚರ ಸೋಸುಕ) ಅಳವಡಿಸಿ, ನಂತರ ಅದನ್ನು ಇತರ ಡೊಮೇನ್ಗಳಿಗೂ ವಿಸ್ತರಿಸಲಿದೆ. ಟ್ವಿಟರ್ ಬಳಕೆದಾರರಿಗೆ ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಸೆನ್ಸಾರ್ಶಿಪ್ ಭಯವಿಲ್ಲದೆ ವ್ಯಕ್ತಪಡಿಸುವ ಹಕ್ಕಿದೆ ಎಂದು ಸಂಸ್ಥೆ ತಿಳಿಸಿದೆ.
‘ನಿಯಮಗಳನ್ನು ಉಲ್ಲಂಘಿಸುವ ವಿಷಯದಿಂದ ಬಳಕೆದಾರರನ್ನು ನಮ್ಮ ಜಾಲತಾಣದಲ್ಲಿ ಸುರಕ್ಷಿತವಾಗಿರಿಸುವುದು ನಮ್ಮ ಜವಾಬ್ದಾರಿ ಮತ್ತು ನಂಬಿಕೆ. ಈ ನಂಬಿಕೆಗಳು ವಾಕ್ ಸ್ವಾತಂತ್ರ್ಯದ ಅಡಿಪಾಯವಾಗಿದೆ. ಹಾಗಂಥ, ನಿಯಮ ಉಲ್ಲಂಘಿಸಿದ ಟ್ವೀಟ್ಗಳಿಗೆ ಮುಕ್ತವಾಗಿ ಬಳಕೆದಾರರನ್ನು ತಲುಪುವ ಸ್ವಾತಂತ್ರ್ಯವಿದೆ ಎಂದಲ್ಲ. ನಮ್ಮ ನೀತಿಗಳನ್ನು ಉಲ್ಲಂಘಿಸುವ ಟ್ವೀಟ್ಗಳು ಗೋಚರಿಸದಂತೆ, ಅವು ತಲುಪುವ ವ್ಯಾಪ್ತಿಯನ್ನು ನಿರ್ಬಂಧಿಸುವುದು ನಮ್ಮ ತತ್ವಾದರ್ಶವಾಗಿದೆ’ ಎಂದು ಸಂಸ್ಥೆ ಹೇಳಿದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…