BREAKING NEWS

ಬಿಜೆಪಿ ಮುಖಂಡನ ಬರ್ಬರ ಹತ್ಯೆ : ಆಸ್ಪತ್ರೆಗೆ ಪ್ರಲ್ಹಾದ್ ಜೋಶಿ ಭೇಟಿ

ಹುಬ್ಬಳ್ಳಿ : ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.

ಪ್ರವೀಣ ಕಮ್ಮಾರ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಗರಗ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಇನ್ನು ಕೋಟೂರ ಗ್ರಾಮ ಪಂಚಾಯತಿ ಉಪಾಧ್ಯಕ್ಷನ ಹತ್ಯೆ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಭೇಟಿ ನೀಡಿದರು.ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿದ್ದ ಪ್ರವೀಣ ಕೊಲೆ ಹಿನ್ನಲೆ ಗ್ರಾಮದಲ್ಲಿ ಹೆಚ್ಚಿನ ಬಂದೋಬಸ್ತ್ ನೀಡಲು ಸಹ ಸೂಚನೆ ನೀಡಲಾಗಿದೆ. ಇದರಿಂದಾಗಿ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದ್ದುಈ ಹಿನ್ನೆಲೆ ಗ್ರಾಮದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತಿಗೆ ಅಧಿಕಾರಿಗಳು ನೇತೃತ್ವ ವಹಿಸಿದ್ದಾರೆ.

ಇನ್ನು ಧಾರವಾಡ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ ಹತ್ಯೆ ಯಾದ ತಕ್ಷಣ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶವಾಗಾರಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಪ್ರಹ್ಲಾದ್ ಜೋಶಿ ಗೆ ಶಾಸಕ ಅಮೃತ್ ದೇಸಾಯಿ ಇತರರು ಸಾಥ್ ನೀಡಿದರು.

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

20 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago