BREAKING NEWS

ಗೃಹಲಕ್ಷ್ಮೀಗೆ ಶಾಸಕರ ವೇತನ ಬಿಟ್ಟುಕೊಟ್ಟ ಬಸವರಾಜ ರಾಯರೆಡ್ಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಯೋಜನೆಗೆ ತಮ್ಮ ಶಾಸಕ ಸ್ಥಾನದ ವೇತನವನ್ನು ಮಾಜಿ ಸಚಿವ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಇತರೆ ಶಾಸಕರು ಹಾಗೂ ಸಚಿವರಿಗೆ ಕಾಂಗ್ರೆಸ್‌ನ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ಮಾದರಿಯಾಗಿದ್ದಾರೆ.

ರಾಜ್ಯ ಸರ್ಕಾರ ಇಷ್ಟೊಂದು ದೊಡ್ಡ ಯೋಜನೆಯನ್ನು ಜಾರಿಗೆ ತಂದಿದೆ. ಆದ್ದರಿಂದ ಸರ್ಕಾರದೊಂದಿಗೆ ಕೈ ಜೋಡಿಸುವ ಪ್ರಯುಕ್ತ ತಮ್ಮ ಪ್ರತಿ ತಿಂಗಳ ಶಾಸಕರ ವೇತನವನ್ನು ಗೃಹಲಕ್ಷ್ಮೀ ಯೋಜನೆಗೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಪತ್ರ ಬರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸವರಾಜ ರಾಯರೆಡ್ಡಿ ಅವರು, ಈ ಹಿಂದೆಯೂ ನಾನು ಶಾಸಕ ಸ್ಥಾನದ ವೇತನವನ್ನು ಪಡೆದಿಲ್ಲ. ಆಗಲೂ ಬೇರೆ ಯೋಜನೆಗೆ ಬಿಟ್ಟುಕೊಟ್ಟಿದ್ದೆ, ಈಗ ಗೃಹಲಕ್ಷ್ಮೀ ಯೋಜನೆಗೆ ನನ್ನ ವೇತನ ಬಿಟ್ಟುಕೊಡಲು ನಿರ್ಧರಿಸಿ ಪತ್ರ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ತೆಗೆದುಕೊಂಡ ನಿರ್ಧಾರವನ್ನು ಕಾಂಗ್ರೆಸ್‌ನ ಇತರೆ ಶಾಸಕರು ಹಾಗೂ ಸಚಿವರು ಅನುಸರಿಸುತ್ತಾರಾ ಎಂಬುದನ್ನು ನೋಡಬೇಕಿದೆ.

ಇನ್ನು, ಬರ ಅಥವಾ ಪ್ರವಾಹ ಪರಿಸ್ಥಿತಿ ಸೇರಿ ಕೆಲವು ಸಂದರ್ಭದಲ್ಲಿ ಶಾಸಕರು ಹಾಗೂ ಸಚಿವರು ತಮ್ಮ ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಿರುವ ಉದಾಹರಣೆಗಳು ಹಲವು ಇವೆ. ಆದರೆ, ಶಾಸಕರ ಅವಧಿ ಇರುವ ತನಕ ತಮ್ಮ ಶಾಸಕ ಸ್ಥಾನದ ವೇತನವನ್ನು ಯೋಜನೆಯೊಂದಕ್ಕೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಬರೆದುಕೊಟ್ಟಿರುವುದು ಅಪರೂಪ ಎಂತಲೇ ಹೇಳಬಹುದು.

ಶಾಸಕರಿಗೆ ಎಷ್ಟಿದೆ ಸಂಬಳ?

ಸದ್ಯ ಕರ್ನಾಟಕದಲ್ಲಿನ ಶಾಸಕರ ಮೂಲ ವೇತನ ಮಾಸಿಕ 40 ಸಾವಿರ ರೂ. ಇದೆ. ಇದರ ಜೊತೆ ಕ್ಷೇತ್ರ ಭತ್ಯೆ 60 ಸಾವಿರ ರೂ., ಕ್ಷೇತ್ರ ಪ್ರಯಾಣ ಭತ್ಯೆ 60,000 ರೂ. ಇದೆ. ತಮ್ಮ ಆಪ್ತ ಸಹಾಯಕರಿಗೆ ವೇತನ ಸೇರಿ ಇತರ ವೆಚ್ಚಗಳಿಗೆ 20,000 ರೂ., 5 ಸಾವಿರ ರೂ. ಅಂಚೆ ವೆಚ್ಚ ಹಾಗೂ ಫೋನ್‌ ಭತ್ಯೆಯಾಗಿ 20 ಸಾವಿರ ರೂ. ಅನ್ನು ಶಾಸಕರು ಪಡೆಯುತ್ತಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago