ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಯೋಜನೆಗೆ ತಮ್ಮ ಶಾಸಕ ಸ್ಥಾನದ ವೇತನವನ್ನು ಮಾಜಿ ಸಚಿವ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಇತರೆ ಶಾಸಕರು ಹಾಗೂ ಸಚಿವರಿಗೆ ಕಾಂಗ್ರೆಸ್ನ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ಮಾದರಿಯಾಗಿದ್ದಾರೆ.
ರಾಜ್ಯ ಸರ್ಕಾರ ಇಷ್ಟೊಂದು ದೊಡ್ಡ ಯೋಜನೆಯನ್ನು ಜಾರಿಗೆ ತಂದಿದೆ. ಆದ್ದರಿಂದ ಸರ್ಕಾರದೊಂದಿಗೆ ಕೈ ಜೋಡಿಸುವ ಪ್ರಯುಕ್ತ ತಮ್ಮ ಪ್ರತಿ ತಿಂಗಳ ಶಾಸಕರ ವೇತನವನ್ನು ಗೃಹಲಕ್ಷ್ಮೀ ಯೋಜನೆಗೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿಗೆ ಕಾಂಗ್ರೆಸ್ನ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಪತ್ರ ಬರೆದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸವರಾಜ ರಾಯರೆಡ್ಡಿ ಅವರು, ಈ ಹಿಂದೆಯೂ ನಾನು ಶಾಸಕ ಸ್ಥಾನದ ವೇತನವನ್ನು ಪಡೆದಿಲ್ಲ. ಆಗಲೂ ಬೇರೆ ಯೋಜನೆಗೆ ಬಿಟ್ಟುಕೊಟ್ಟಿದ್ದೆ, ಈಗ ಗೃಹಲಕ್ಷ್ಮೀ ಯೋಜನೆಗೆ ನನ್ನ ವೇತನ ಬಿಟ್ಟುಕೊಡಲು ನಿರ್ಧರಿಸಿ ಪತ್ರ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ತೆಗೆದುಕೊಂಡ ನಿರ್ಧಾರವನ್ನು ಕಾಂಗ್ರೆಸ್ನ ಇತರೆ ಶಾಸಕರು ಹಾಗೂ ಸಚಿವರು ಅನುಸರಿಸುತ್ತಾರಾ ಎಂಬುದನ್ನು ನೋಡಬೇಕಿದೆ.
ಇನ್ನು, ಬರ ಅಥವಾ ಪ್ರವಾಹ ಪರಿಸ್ಥಿತಿ ಸೇರಿ ಕೆಲವು ಸಂದರ್ಭದಲ್ಲಿ ಶಾಸಕರು ಹಾಗೂ ಸಚಿವರು ತಮ್ಮ ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಿರುವ ಉದಾಹರಣೆಗಳು ಹಲವು ಇವೆ. ಆದರೆ, ಶಾಸಕರ ಅವಧಿ ಇರುವ ತನಕ ತಮ್ಮ ಶಾಸಕ ಸ್ಥಾನದ ವೇತನವನ್ನು ಯೋಜನೆಯೊಂದಕ್ಕೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಬರೆದುಕೊಟ್ಟಿರುವುದು ಅಪರೂಪ ಎಂತಲೇ ಹೇಳಬಹುದು.
ಸದ್ಯ ಕರ್ನಾಟಕದಲ್ಲಿನ ಶಾಸಕರ ಮೂಲ ವೇತನ ಮಾಸಿಕ 40 ಸಾವಿರ ರೂ. ಇದೆ. ಇದರ ಜೊತೆ ಕ್ಷೇತ್ರ ಭತ್ಯೆ 60 ಸಾವಿರ ರೂ., ಕ್ಷೇತ್ರ ಪ್ರಯಾಣ ಭತ್ಯೆ 60,000 ರೂ. ಇದೆ. ತಮ್ಮ ಆಪ್ತ ಸಹಾಯಕರಿಗೆ ವೇತನ ಸೇರಿ ಇತರ ವೆಚ್ಚಗಳಿಗೆ 20,000 ರೂ., 5 ಸಾವಿರ ರೂ. ಅಂಚೆ ವೆಚ್ಚ ಹಾಗೂ ಫೋನ್ ಭತ್ಯೆಯಾಗಿ 20 ಸಾವಿರ ರೂ. ಅನ್ನು ಶಾಸಕರು ಪಡೆಯುತ್ತಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…