ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಯೋಜನೆಗೆ ತಮ್ಮ ಶಾಸಕ ಸ್ಥಾನದ ವೇತನವನ್ನು ಮಾಜಿ ಸಚಿವ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಇತರೆ ಶಾಸಕರು ಹಾಗೂ ಸಚಿವರಿಗೆ ಕಾಂಗ್ರೆಸ್ನ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ಮಾದರಿಯಾಗಿದ್ದಾರೆ.
ರಾಜ್ಯ ಸರ್ಕಾರ ಇಷ್ಟೊಂದು ದೊಡ್ಡ ಯೋಜನೆಯನ್ನು ಜಾರಿಗೆ ತಂದಿದೆ. ಆದ್ದರಿಂದ ಸರ್ಕಾರದೊಂದಿಗೆ ಕೈ ಜೋಡಿಸುವ ಪ್ರಯುಕ್ತ ತಮ್ಮ ಪ್ರತಿ ತಿಂಗಳ ಶಾಸಕರ ವೇತನವನ್ನು ಗೃಹಲಕ್ಷ್ಮೀ ಯೋಜನೆಗೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿಗೆ ಕಾಂಗ್ರೆಸ್ನ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಪತ್ರ ಬರೆದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸವರಾಜ ರಾಯರೆಡ್ಡಿ ಅವರು, ಈ ಹಿಂದೆಯೂ ನಾನು ಶಾಸಕ ಸ್ಥಾನದ ವೇತನವನ್ನು ಪಡೆದಿಲ್ಲ. ಆಗಲೂ ಬೇರೆ ಯೋಜನೆಗೆ ಬಿಟ್ಟುಕೊಟ್ಟಿದ್ದೆ, ಈಗ ಗೃಹಲಕ್ಷ್ಮೀ ಯೋಜನೆಗೆ ನನ್ನ ವೇತನ ಬಿಟ್ಟುಕೊಡಲು ನಿರ್ಧರಿಸಿ ಪತ್ರ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ತೆಗೆದುಕೊಂಡ ನಿರ್ಧಾರವನ್ನು ಕಾಂಗ್ರೆಸ್ನ ಇತರೆ ಶಾಸಕರು ಹಾಗೂ ಸಚಿವರು ಅನುಸರಿಸುತ್ತಾರಾ ಎಂಬುದನ್ನು ನೋಡಬೇಕಿದೆ.
ಇನ್ನು, ಬರ ಅಥವಾ ಪ್ರವಾಹ ಪರಿಸ್ಥಿತಿ ಸೇರಿ ಕೆಲವು ಸಂದರ್ಭದಲ್ಲಿ ಶಾಸಕರು ಹಾಗೂ ಸಚಿವರು ತಮ್ಮ ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಿರುವ ಉದಾಹರಣೆಗಳು ಹಲವು ಇವೆ. ಆದರೆ, ಶಾಸಕರ ಅವಧಿ ಇರುವ ತನಕ ತಮ್ಮ ಶಾಸಕ ಸ್ಥಾನದ ವೇತನವನ್ನು ಯೋಜನೆಯೊಂದಕ್ಕೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಬರೆದುಕೊಟ್ಟಿರುವುದು ಅಪರೂಪ ಎಂತಲೇ ಹೇಳಬಹುದು.
ಸದ್ಯ ಕರ್ನಾಟಕದಲ್ಲಿನ ಶಾಸಕರ ಮೂಲ ವೇತನ ಮಾಸಿಕ 40 ಸಾವಿರ ರೂ. ಇದೆ. ಇದರ ಜೊತೆ ಕ್ಷೇತ್ರ ಭತ್ಯೆ 60 ಸಾವಿರ ರೂ., ಕ್ಷೇತ್ರ ಪ್ರಯಾಣ ಭತ್ಯೆ 60,000 ರೂ. ಇದೆ. ತಮ್ಮ ಆಪ್ತ ಸಹಾಯಕರಿಗೆ ವೇತನ ಸೇರಿ ಇತರ ವೆಚ್ಚಗಳಿಗೆ 20,000 ರೂ., 5 ಸಾವಿರ ರೂ. ಅಂಚೆ ವೆಚ್ಚ ಹಾಗೂ ಫೋನ್ ಭತ್ಯೆಯಾಗಿ 20 ಸಾವಿರ ರೂ. ಅನ್ನು ಶಾಸಕರು ಪಡೆಯುತ್ತಿದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…