ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ.
ʼಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂಬ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆʼ ಎಂದು ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ತಿಳಿಸಿದ್ದಾರೆ.
ಸರಕಾರದಿಂದ ಬಿಡುಗಡೆ ಆಗಿರುವ ಅನುದಾನ ಪಾಲಿಕೆಯ ಖಜಾನೆಯಲ್ಲಿ ಇದ್ದರೂ ಗುತ್ತಿಗೆದಾರರಿಗೆ ಬಾಕಿ ಬಿಡುಗಡೆ ಆಗುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಾಗ, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಬಿಲ್ ಪಾವತಿ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮತ್ತು ಮುಖ್ಯ ಆಯುಕ್ತರೊಂದಿಗೆ ಚರ್ಚಿಸಿ ಆದಷ್ಟೂ ತ್ವರಿತವಾಗಿ ಬಾಕಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಜಿ.ಎಂ. ರವೀಂದ್ರ, ನಂದಕುಮಾರ್ ಜಿ.ಎಂ. ಡಿ.ಎಂ.ನಾಗರಾಜ್, ಹನುಮಂತಯ್ಯ ಮೊದಲಾದವರು ಉಪಸ್ಥಿತರಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…