BREAKING NEWS

ಡಿಸೆಂಬರ್‌ಗೆ ಬಿಬಿಎಂಪಿ ಚುನಾವಣೆ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬರುವ ಡಿಸೆಂಬರ್‌ಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರ ವಿಶೇಷ ದರ್ಶನ ವ್ಯವಸ್ಥೆಯ ಅನುಷ್ಠಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಿಬಿಎಂಪಿಗೆ ಚುನಾವಣೆ ಬೇಗ ಆಗಬೇಕು ಎಂಬ ಉದ್ದೇಶ ಹೊಂದಿದ್ದೇವೆ.

ಅದಕ್ಕಾಗಿ ನಮ್ಮ ಪಕ್ಷದವರೇ ನ್ಯಾಯಾಲಯದ ಮೊರೆ ಹೋಗಿದ್ದು, ಆದರೆ, ಬಿಜೆಪಿಯವರು ವಾರ್ಡ್‍ಗಳ ವಿಂಗಡಣೆಯನ್ನು ಮನಸೋ ಇಚ್ಚೆ ಮಾಡಿದ್ದಾರೆ. ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದ್ದೇವೆ ಎಂದರು. ವಾರ್ಡ್ ವಿಂಗಡನೆ ವಿಚಾರವನ್ನು ಅಧಿಕಾರಗಳ ನಿರ್ಧಾರಕ್ಕೆ ಬಿಟ್ಟಿದ್ದೇವೆ. ನಾವು ಹಸ್ತಕ್ಷೇಪ ಮಾಡುವುದಿಲ್ಲ. ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಪ್ರಾದೇಶಿಕ ವಿಂಗಡನೆ ಮಾಡಿದ್ದೆವು. ಯಾರು ಸಹ ಕೋರ್ಟ್‍ಗೆ ಹೋಗಿರಲಿಲ್ಲ ಎಂದು ಅವರು ತಿಳಿಸಿದರು.

ಆದರೆ, ಬಿಜೆಪಿಯವರು ರಾಜಕೀಯವಾಗಿ ವಾರ್ಡ್‍ಗಳ ಪುನರ್ ವಿಂಗಡನೆ ಮಾಡಿದ್ದಾರೆ. ಹಾಗಾಗಿ ಮತ್ತೆ ಹೊಸದಾಗಿ ವಾರ್ಡ್‍ಗಳ ಪುನರ್ ವಿಂಗಡನೆ ಮಾಡಲು ತಿಳಿಸಲಾಗಿದೆ ಬಿಬಿಎಂಪಿ ಹೊಸ ಕಾಯ್ದೆ ಪ್ರಕಾರ 243 ವಾರ್ಡ್ ಗಳಿಗೆ ಚುನಾವಣೆ ಮಾಡುತ್ತೇವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಲ್ಲಾ ಕಾಲದಲ್ಲೂ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿದ್ದೇವೆ. ಈ ಬಾರಿಯೂ ನಾವು ಅದೇ ರೀತಿ ಚುನಾವಣೆ ಮಾಡುತ್ತೆವೆ ಎಂದು ಅವರು ಹೇಳಿದರು.

ನಿನ್ನೆ ಚಾಮುಂಡಿ ಬೆಟ್ಟಕ್ಕೆ 1ಲಕ್ಷ ಜನ ಹೋಗಿದ್ದಾರೆ. ಅವರಲ್ಲಿ 10 ಸಾವಿರ ಜನ ಹಿರಿಯ ನಾಗರೀಕರು ಆಧಾರ್ ಕಾರ್ಡ್ ತೋರಿಸಿ ದರ್ಶನ ಮಾಡಿದ್ದಾರೆ. ಎ ವರ್ಗದ 205, ಬಿ ವರ್ಗದ 396 ದೇವಸ್ಥಾನ ಗಳು ಮುಜರಾಯಿ ಇಲಾಖೆಯಲ್ಲಿವೆ. ಎ ಹಾಗೂ ಬಿ ವರ್ಗದ ದೇವಾಲಯಗಳಿಗೆ ಹೆಚ್ಚಿನ ಭಕ್ತರು ಬರುತ್ತಾರೆ. 65 ವರ್ಷ ವಯಸ್ಸು ಆಗಿರೋರಿಗೆ ಆರೋಗ್ಯ ಸಮಸ್ಯೆ ಇರುತ್ತದೆ. ಸರದಿ ಸಾಲಿನಲ್ಲಿ ನಿಲ್ಲೋದಕ್ಕೆ ಆಗೋದಿಲ್ಲ. ಹಾಗಾಗಿ ದೇವಸ್ಥಾನದ ಅರ್ಚಕರು ಒಕ್ಕೂಟದಿಂದ ಬಂದು ಮನವಿ ಮಾಡಿದ್ದರು. ನಾವು ಈ ಅವಕಾಶ ಕಲ್ಪಿಸಲು ನಿರ್ಧರಿಸಿದ್ದೇವೆ ಎಂದರು.

ದೇವಸ್ಥಾನಕ್ಕೆ ಹೋಗಿ ಬರುವ ಭಕ್ತರಿಗೆ ಸಂತೋಷದ ವಾತಾವರಣ ಇರಬೇಕು. ನೀರು ಹಾಗೂ ಶೌಚಾಲಯದ ವ್ಯವಸ್ಥೆಗೆ ಯಾವುದೇ ಸಮಸ್ಯೆ ಆಗದ ಹಾಗೆ ವ್ಯವಸ್ಥೆ ಕಲ್ಪಿಸಲು ತಿಳಿಸಿರುವುದಾಗಿ ಅವರು ಹೇಳಿದರು. ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒಂದು ದಿನಕ್ಕೆ 1 ಲಕ್ಷ 56 ಸಾವಿರ ಟ್ರಿಪ್ ಇರುತ್ತವೆ. ಅದರಲ್ಲಿ ಯಾವುದೋ ಒಂದು ಅವ್ಯವಸ್ಥೆಯಾದರೆ ಎಲ್ಲಾ ಕಡೆ ಅವ್ಯವಸ್ಥೆ ಆಗಿದೆ ಎಂದು ಭಾವಿಸಬೇಕಿಲ್ಲ. ಹೆಚ್ಚು ಪ್ರಯಾಣಿಕರು ಬಸ್ಸಿಗೆ ಬಂದರೂ ಸಿಬ್ಬಂದಿಗೆ ಒತ್ತಡ ಹಾಗೂ ಸಾರ್ವಜನಿಕರಿಗೂ ಸಹ ಒತ್ತಡ ಆಗುತ್ತದೆ. ಅಲ್ಲದೆ, ವಾಹನಗಳಿಗೂ ಸಮಸ್ಯೆ ಆಗುತ್ತದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರದ ಅವಯಲ್ಲಿ ನಾಲ್ಕು ಸಾವಿರ ಬಸ್ ಖರೀದಿಗೆ ಆದೇಶ ಕೊಡಲಾಗಿದೆ. ಹೊಸ ಬಸ್ ಈ ವರ್ಷದಲ್ಲಿ ಬರುತ್ತವೆ.ಶೇ. 95ರಷ್ಟು ಸಾಮಾನ್ಯಹೊಸ ಬಸ್‍ಗಳು, ಹಾಗೂ ಶೇ.5ರಷ್ಟು ಮಲ್ಟಿ ಆ್ಯಕ್ಷಲ್ ಬಸ್‍ಗಳು ಹಾಗೂ ಬೇರೆ ರೀತಿ ಬಸ್ ಗಳು ಬರಲಿವೆ. ಕಳೆದ ವರ್ಷ ನಾಲ್ಕು ಕಾಪೆರ್ರೆಷನ್‍ಗಳು 4 ಸಾವಿರ ಕೋಟಿ ರೂ. ನಷ್ಟದಲ್ಲಿವೆ ಎಂದು ಅವರು ಹೇಳಿದರು.

andolanait

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

2 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

2 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

3 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

3 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

4 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

4 hours ago