ಬೆಂಗಳೂರು : “ಅಗ್ನಿ ಅನಾಹುತದಿಂದ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ಇಂಜಿನಿಯರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಸೋಮವಾರ ಅವರು ಮಾತನಾಡಿದರು.
“ನಾನು ಈ ಹಿಂದೆ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ವಿಚಾರಿಸಲು ಭೇಟಿ ಮಾಡಿದಾಗ ಅವರ ಆರೋಗ್ಯ ಸುಧಾರಿಸುತ್ತಿರುವಂತೆ ಕಂಡಿತ್ತು. ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂಬ ಕಾರಣಕ್ಕೆ ಈ aಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ಕೂಡ 2-3 ಬಾರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೆ. ಇಲ್ಲಿನ ವೈದ್ಯರು ಎಲ್ಲಾ ರೀತಿಯ ಚಿಕಿತ್ಸೆ ನೀಡಿ ಅವರ ಆರೋಗ್ಯ ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊರ್ವ ಸಿಬ್ಬಂದಿ ಜ್ಯೋತಿ ಅವರಲ್ಲಿ ಚೇತರಿಕೆ ಕಾಣುತ್ತಿದ್ದು, ಸುಟ್ಟ ಗಾಯಗಳಿವೆ” ಎಂದು ತಿಳಿಸಿದರು.
ಅಗ್ನಿ ಅನಾಹುತದ ಬಗ್ಗೆ ತನಿಖೆ ಎಲ್ಲಿಯವರೆಗೆ ಬಂದಿದೆ ಎಂದು ಕೇಳಿದ ಪ್ರಶ್ನೆಗೆ, ‘ನಾನು ಈ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ವರದಿಗಳು ಬರಲಿ. ಪೊಲೀಸ್, ಬಿಬಿಎಂಪಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಅದು ಪೂರ್ಣಗೊಳ್ಳಲಿ, ಆಮೇಲೆ ಮಾತನಾಡುತ್ತೇನೆ’ ಎಂದು ತಿಳಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…