BREAKING NEWS

ಆರಗ ಆಸ್ತಿಯಲ್ಲಿ ಬಿಡಿಎ ನಿವೇಶನ

ಬೆಂಗಳೂರು : ಸುಪ್ರೀಂ ಕೋರ್ಟ್‌ ಆದೇಶದಂತೆ ಹಂಚಿಕೆ ರದ್ದುಪಡಿಸಿ, ಬಿಡಿಎ ವಶಕ್ಕೆ ಸ್ವತ್ತನ್ನು ಹಿಂಪಡೆಯಲು ಪ್ರಕ್ರಿಯೆ ಆರಂಭಿಸಿರುವ ವಿವಾದಿತ ನಿವೇಶನವನ್ನೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸಚಿವರಿಗೆ 2006ರಲ್ಲಿ 40×60 ಚದರ ಅಡಿ ವಿಸ್ತೀರ್ಣದ ನಿವೇಶನ ಹಂಚಿಕೆ ಮಾಡಲಾಗಿತ್ತು. ಜ್ಞಾನೇಂದ್ರ ಅವರ ಕೋರಿಕೆಯಂತೆ ಆ ಹಂಚಿಕೆಯನ್ನು ರದ್ದು ಮಾಡಿ, 2009ರಲ್ಲಿ ಅದೇ ಬಡಾವಣೆಯಲ್ಲಿ 50×80 ಚ. ಅಡಿ ವಿಸ್ತೀರ್ಣದ ನಿವೇಶನ ಹಂಚಿಕೆ ಮಾಡಲಾಗಿತ್ತು.

ಕಾನೂನು ತೊಡಕಿನ ಕಾರಣದಿಂದ 2021ರಲ್ಲಿ ಆರ್‌ಎಂವಿ ಎರಡನೇ ಹಂತದ ಬಡಾವಣೆಯಲ್ಲಿ 50×80 ಚ. ಅಡಿ ವಿಸ್ತೀರ್ಣದ ಬದಲಿ ನಿವೇಶನ ಹಂಚಿಕೆ ಮಾಡಲಾಗಿತ್ತು.

ಬಿಡಿಎ ನಿವೇಶನ ಹಂಚಿಕೆ ನಿಯಮಗಳ ಸೆಕ್ಷನ್‌ 11–ಎ ಉಲ್ಲಂಘನೆಯಾಗಿರುವ ಕಾರಣದಿಂದ ಈ ಬದಲಿ ನಿವೇಶನ ಹಂಚಿಕೆಯನ್ನು ರದ್ದುಮಾಡಿ, ಸ್ವತ್ತನ್ನು ಪ್ರಾಧಿಕಾರದ ವಶಕ್ಕೆ ಪಡೆಯುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು.

ಗೃಹ ಸಚಿವರಿಗೆ ನೋಟಿಸ್‌ ಜಾರಿ ಮಾಡಿದ್ದ ಬಿಡಿಎ, ಸ್ವತ್ತನ್ನು ಪ್ರಾಧಿಕಾರದ ವಶಕ್ಕೆ ಮರಳಿಸುವಂತೆ ಸೂಚಿಸಿತ್ತು. ಬಳಿಕ ಮನವಿಯೊಂದನ್ನು ಸಲ್ಲಿಸಿದ್ದ ಸಚಿವರು, ‘ಬಿಡಿಎ ತಪ್ಪಿನಿಂದಲೇ ಸಮಸ್ಯೆ ಉದ್ಭವಿಸಿದೆ. ನನಗೆ ಬೇರೊಂದು ನಿವೇಶನ ಮಂಜೂರು ಮಾಡಿ’ ಎಂದು ಕೋರಿದ್ದರು.

ಮನವಿಯನ್ನು ಬಾಕಿ ಇರಿಸಿಕೊಂಡಿರುವ ಬಿಡಿಎ ಆಡಳಿತ ಮಂಡಳಿ, ಜ್ಞಾನೇಂದ್ರ ಅವರಿಂದ ನಿವೇಶನವನ್ನು ವಶಕ್ಕೆ ಪಡೆಯಲು ನಗರದ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಜ್ಞಾನೇಂದ್ರ, ವಿವಾದಿತ ಬಿಡಿಎ ನಿವೇಶನವನ್ನೂ ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದ ಬಡಾವಣೆಯ ಭೂಪಸಂದ್ರದಲ್ಲಿ ನಿವೇಶನ ಸಂಖ್ಯೆ 2 ಅನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.

‘ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನಕ್ಕೆ ಬದಲಿಯಾಗಿ ಹಂಚಿಕೆ ಮಾಡಿರುವ ಈ ನಿವೇಶನಕ್ಕೆ ₹ 13.94 ಲಕ್ಷ ಪಾವತಿಸಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ₹ 3 ಲಕ್ಷ ವೆಚ್ಚ ಮಾಡಲಾಗಿದೆ. ಪ್ರಸ್ತುತ ಈ ನಿವೇಶನದ ಮಾರುಕಟ್ಟೆ ಮೌಲ್ಯ ₹ 4 ಕೋಟಿ’ ಎಂದು ನಾಮಪತ್ರದ ಜತೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

‘ಸಚಿವರಿಗೆ ಆರ್‌ಎಂವಿ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನವನ್ನು ವಾಪಸ್‌ ಪಡೆಯಲು ನಗರ ಸಿವಿಲ್‌ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದ್ದೇವೆ. ಸಚಿವರ ಮನವಿಯೂ ಪ್ರಾಧಿಕಾರದಲ್ಲಿ ಬಾಕಿ ಇದೆ’ ಎಂದು ಬಿಡಿಎ ಕಾರ್ಯದರ್ಶಿ ಶಾಂತರಾಜು ವೈ.ಬಿ. ಹೇಳಿದರು.

lokesh

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

3 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

5 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

6 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

6 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

6 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

6 hours ago