BREAKING NEWS

ಆರಗ ಆಸ್ತಿಯಲ್ಲಿ ಬಿಡಿಎ ನಿವೇಶನ

ಬೆಂಗಳೂರು : ಸುಪ್ರೀಂ ಕೋರ್ಟ್‌ ಆದೇಶದಂತೆ ಹಂಚಿಕೆ ರದ್ದುಪಡಿಸಿ, ಬಿಡಿಎ ವಶಕ್ಕೆ ಸ್ವತ್ತನ್ನು ಹಿಂಪಡೆಯಲು ಪ್ರಕ್ರಿಯೆ ಆರಂಭಿಸಿರುವ ವಿವಾದಿತ ನಿವೇಶನವನ್ನೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸಚಿವರಿಗೆ 2006ರಲ್ಲಿ 40×60 ಚದರ ಅಡಿ ವಿಸ್ತೀರ್ಣದ ನಿವೇಶನ ಹಂಚಿಕೆ ಮಾಡಲಾಗಿತ್ತು. ಜ್ಞಾನೇಂದ್ರ ಅವರ ಕೋರಿಕೆಯಂತೆ ಆ ಹಂಚಿಕೆಯನ್ನು ರದ್ದು ಮಾಡಿ, 2009ರಲ್ಲಿ ಅದೇ ಬಡಾವಣೆಯಲ್ಲಿ 50×80 ಚ. ಅಡಿ ವಿಸ್ತೀರ್ಣದ ನಿವೇಶನ ಹಂಚಿಕೆ ಮಾಡಲಾಗಿತ್ತು.

ಕಾನೂನು ತೊಡಕಿನ ಕಾರಣದಿಂದ 2021ರಲ್ಲಿ ಆರ್‌ಎಂವಿ ಎರಡನೇ ಹಂತದ ಬಡಾವಣೆಯಲ್ಲಿ 50×80 ಚ. ಅಡಿ ವಿಸ್ತೀರ್ಣದ ಬದಲಿ ನಿವೇಶನ ಹಂಚಿಕೆ ಮಾಡಲಾಗಿತ್ತು.

ಬಿಡಿಎ ನಿವೇಶನ ಹಂಚಿಕೆ ನಿಯಮಗಳ ಸೆಕ್ಷನ್‌ 11–ಎ ಉಲ್ಲಂಘನೆಯಾಗಿರುವ ಕಾರಣದಿಂದ ಈ ಬದಲಿ ನಿವೇಶನ ಹಂಚಿಕೆಯನ್ನು ರದ್ದುಮಾಡಿ, ಸ್ವತ್ತನ್ನು ಪ್ರಾಧಿಕಾರದ ವಶಕ್ಕೆ ಪಡೆಯುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು.

ಗೃಹ ಸಚಿವರಿಗೆ ನೋಟಿಸ್‌ ಜಾರಿ ಮಾಡಿದ್ದ ಬಿಡಿಎ, ಸ್ವತ್ತನ್ನು ಪ್ರಾಧಿಕಾರದ ವಶಕ್ಕೆ ಮರಳಿಸುವಂತೆ ಸೂಚಿಸಿತ್ತು. ಬಳಿಕ ಮನವಿಯೊಂದನ್ನು ಸಲ್ಲಿಸಿದ್ದ ಸಚಿವರು, ‘ಬಿಡಿಎ ತಪ್ಪಿನಿಂದಲೇ ಸಮಸ್ಯೆ ಉದ್ಭವಿಸಿದೆ. ನನಗೆ ಬೇರೊಂದು ನಿವೇಶನ ಮಂಜೂರು ಮಾಡಿ’ ಎಂದು ಕೋರಿದ್ದರು.

ಮನವಿಯನ್ನು ಬಾಕಿ ಇರಿಸಿಕೊಂಡಿರುವ ಬಿಡಿಎ ಆಡಳಿತ ಮಂಡಳಿ, ಜ್ಞಾನೇಂದ್ರ ಅವರಿಂದ ನಿವೇಶನವನ್ನು ವಶಕ್ಕೆ ಪಡೆಯಲು ನಗರದ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಜ್ಞಾನೇಂದ್ರ, ವಿವಾದಿತ ಬಿಡಿಎ ನಿವೇಶನವನ್ನೂ ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದ ಬಡಾವಣೆಯ ಭೂಪಸಂದ್ರದಲ್ಲಿ ನಿವೇಶನ ಸಂಖ್ಯೆ 2 ಅನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.

‘ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನಕ್ಕೆ ಬದಲಿಯಾಗಿ ಹಂಚಿಕೆ ಮಾಡಿರುವ ಈ ನಿವೇಶನಕ್ಕೆ ₹ 13.94 ಲಕ್ಷ ಪಾವತಿಸಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ₹ 3 ಲಕ್ಷ ವೆಚ್ಚ ಮಾಡಲಾಗಿದೆ. ಪ್ರಸ್ತುತ ಈ ನಿವೇಶನದ ಮಾರುಕಟ್ಟೆ ಮೌಲ್ಯ ₹ 4 ಕೋಟಿ’ ಎಂದು ನಾಮಪತ್ರದ ಜತೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

‘ಸಚಿವರಿಗೆ ಆರ್‌ಎಂವಿ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನವನ್ನು ವಾಪಸ್‌ ಪಡೆಯಲು ನಗರ ಸಿವಿಲ್‌ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದ್ದೇವೆ. ಸಚಿವರ ಮನವಿಯೂ ಪ್ರಾಧಿಕಾರದಲ್ಲಿ ಬಾಕಿ ಇದೆ’ ಎಂದು ಬಿಡಿಎ ಕಾರ್ಯದರ್ಶಿ ಶಾಂತರಾಜು ವೈ.ಬಿ. ಹೇಳಿದರು.

lokesh

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

2 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

2 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

2 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

2 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

11 hours ago