BREAKING NEWS

ಆರಗ ಆಸ್ತಿಯಲ್ಲಿ ಬಿಡಿಎ ನಿವೇಶನ

ಬೆಂಗಳೂರು : ಸುಪ್ರೀಂ ಕೋರ್ಟ್‌ ಆದೇಶದಂತೆ ಹಂಚಿಕೆ ರದ್ದುಪಡಿಸಿ, ಬಿಡಿಎ ವಶಕ್ಕೆ ಸ್ವತ್ತನ್ನು ಹಿಂಪಡೆಯಲು ಪ್ರಕ್ರಿಯೆ ಆರಂಭಿಸಿರುವ ವಿವಾದಿತ ನಿವೇಶನವನ್ನೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸಚಿವರಿಗೆ 2006ರಲ್ಲಿ 40×60 ಚದರ ಅಡಿ ವಿಸ್ತೀರ್ಣದ ನಿವೇಶನ ಹಂಚಿಕೆ ಮಾಡಲಾಗಿತ್ತು. ಜ್ಞಾನೇಂದ್ರ ಅವರ ಕೋರಿಕೆಯಂತೆ ಆ ಹಂಚಿಕೆಯನ್ನು ರದ್ದು ಮಾಡಿ, 2009ರಲ್ಲಿ ಅದೇ ಬಡಾವಣೆಯಲ್ಲಿ 50×80 ಚ. ಅಡಿ ವಿಸ್ತೀರ್ಣದ ನಿವೇಶನ ಹಂಚಿಕೆ ಮಾಡಲಾಗಿತ್ತು.

ಕಾನೂನು ತೊಡಕಿನ ಕಾರಣದಿಂದ 2021ರಲ್ಲಿ ಆರ್‌ಎಂವಿ ಎರಡನೇ ಹಂತದ ಬಡಾವಣೆಯಲ್ಲಿ 50×80 ಚ. ಅಡಿ ವಿಸ್ತೀರ್ಣದ ಬದಲಿ ನಿವೇಶನ ಹಂಚಿಕೆ ಮಾಡಲಾಗಿತ್ತು.

ಬಿಡಿಎ ನಿವೇಶನ ಹಂಚಿಕೆ ನಿಯಮಗಳ ಸೆಕ್ಷನ್‌ 11–ಎ ಉಲ್ಲಂಘನೆಯಾಗಿರುವ ಕಾರಣದಿಂದ ಈ ಬದಲಿ ನಿವೇಶನ ಹಂಚಿಕೆಯನ್ನು ರದ್ದುಮಾಡಿ, ಸ್ವತ್ತನ್ನು ಪ್ರಾಧಿಕಾರದ ವಶಕ್ಕೆ ಪಡೆಯುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು.

ಗೃಹ ಸಚಿವರಿಗೆ ನೋಟಿಸ್‌ ಜಾರಿ ಮಾಡಿದ್ದ ಬಿಡಿಎ, ಸ್ವತ್ತನ್ನು ಪ್ರಾಧಿಕಾರದ ವಶಕ್ಕೆ ಮರಳಿಸುವಂತೆ ಸೂಚಿಸಿತ್ತು. ಬಳಿಕ ಮನವಿಯೊಂದನ್ನು ಸಲ್ಲಿಸಿದ್ದ ಸಚಿವರು, ‘ಬಿಡಿಎ ತಪ್ಪಿನಿಂದಲೇ ಸಮಸ್ಯೆ ಉದ್ಭವಿಸಿದೆ. ನನಗೆ ಬೇರೊಂದು ನಿವೇಶನ ಮಂಜೂರು ಮಾಡಿ’ ಎಂದು ಕೋರಿದ್ದರು.

ಮನವಿಯನ್ನು ಬಾಕಿ ಇರಿಸಿಕೊಂಡಿರುವ ಬಿಡಿಎ ಆಡಳಿತ ಮಂಡಳಿ, ಜ್ಞಾನೇಂದ್ರ ಅವರಿಂದ ನಿವೇಶನವನ್ನು ವಶಕ್ಕೆ ಪಡೆಯಲು ನಗರದ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಜ್ಞಾನೇಂದ್ರ, ವಿವಾದಿತ ಬಿಡಿಎ ನಿವೇಶನವನ್ನೂ ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದ ಬಡಾವಣೆಯ ಭೂಪಸಂದ್ರದಲ್ಲಿ ನಿವೇಶನ ಸಂಖ್ಯೆ 2 ಅನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.

‘ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನಕ್ಕೆ ಬದಲಿಯಾಗಿ ಹಂಚಿಕೆ ಮಾಡಿರುವ ಈ ನಿವೇಶನಕ್ಕೆ ₹ 13.94 ಲಕ್ಷ ಪಾವತಿಸಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ₹ 3 ಲಕ್ಷ ವೆಚ್ಚ ಮಾಡಲಾಗಿದೆ. ಪ್ರಸ್ತುತ ಈ ನಿವೇಶನದ ಮಾರುಕಟ್ಟೆ ಮೌಲ್ಯ ₹ 4 ಕೋಟಿ’ ಎಂದು ನಾಮಪತ್ರದ ಜತೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

‘ಸಚಿವರಿಗೆ ಆರ್‌ಎಂವಿ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನವನ್ನು ವಾಪಸ್‌ ಪಡೆಯಲು ನಗರ ಸಿವಿಲ್‌ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದ್ದೇವೆ. ಸಚಿವರ ಮನವಿಯೂ ಪ್ರಾಧಿಕಾರದಲ್ಲಿ ಬಾಕಿ ಇದೆ’ ಎಂದು ಬಿಡಿಎ ಕಾರ್ಯದರ್ಶಿ ಶಾಂತರಾಜು ವೈ.ಬಿ. ಹೇಳಿದರು.

lokesh

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

6 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

7 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

7 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

8 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

8 hours ago