BREAKING NEWS

ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅತಾರ್ಕಿಕ : ಸುಪ್ರೀಂ ಕೋರ್ಟ್

ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.

ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್‌ಸಿಟಿಇ 2018ರ ಜೂನ್‌ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯ ಇದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್‌ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್‌ ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ ಎಂದು ಹೇಳಿದೆ.

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ಉನ್ನತ ಅರ್ಹತೆ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ.

ಅಂತೆಯೇ ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ (ಡಿ.ಎಡ್‌.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹಲವು ಬಾರಿ ಹೇಳಿದ್ದಾಗಿಯೂ ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

lokesh

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

6 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

6 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

7 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

7 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

7 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

7 hours ago