ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.
ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್ಸಿಟಿಇ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯ ಇದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ ಎಂದು ಹೇಳಿದೆ.
ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ಉನ್ನತ ಅರ್ಹತೆ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ.
ಅಂತೆಯೇ ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ (ಡಿ.ಎಡ್.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಹೇಳಿದ್ದಾಗಿಯೂ ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…