BREAKING NEWS

ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅತಾರ್ಕಿಕ : ಸುಪ್ರೀಂ ಕೋರ್ಟ್

ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.

ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್‌ಸಿಟಿಇ 2018ರ ಜೂನ್‌ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯ ಇದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್‌ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್‌ ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ ಎಂದು ಹೇಳಿದೆ.

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ಉನ್ನತ ಅರ್ಹತೆ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ.

ಅಂತೆಯೇ ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ (ಡಿ.ಎಡ್‌.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹಲವು ಬಾರಿ ಹೇಳಿದ್ದಾಗಿಯೂ ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

lokesh

Recent Posts

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

31 mins ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

3 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

3 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

7 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

7 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

8 hours ago