BREAKING NEWS

ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅತಾರ್ಕಿಕ : ಸುಪ್ರೀಂ ಕೋರ್ಟ್

ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.

ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್‌ಸಿಟಿಇ 2018ರ ಜೂನ್‌ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯ ಇದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್‌ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್‌ ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ ಎಂದು ಹೇಳಿದೆ.

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ಉನ್ನತ ಅರ್ಹತೆ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ.

ಅಂತೆಯೇ ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ (ಡಿ.ಎಡ್‌.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹಲವು ಬಾರಿ ಹೇಳಿದ್ದಾಗಿಯೂ ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

lokesh

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

6 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

7 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

8 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

9 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

14 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

16 hours ago