BREAKING NEWS

ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅತಾರ್ಕಿಕ : ಸುಪ್ರೀಂ ಕೋರ್ಟ್

ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.

ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್‌ಸಿಟಿಇ 2018ರ ಜೂನ್‌ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯ ಇದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್‌ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್‌ ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ ಎಂದು ಹೇಳಿದೆ.

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ಉನ್ನತ ಅರ್ಹತೆ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ.

ಅಂತೆಯೇ ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ (ಡಿ.ಎಡ್‌.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹಲವು ಬಾರಿ ಹೇಳಿದ್ದಾಗಿಯೂ ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

lokesh

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

39 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago