BREAKING NEWS

ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅತಾರ್ಕಿಕ : ಸುಪ್ರೀಂ ಕೋರ್ಟ್

ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.

ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್‌ಸಿಟಿಇ 2018ರ ಜೂನ್‌ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯ ಇದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್‌ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್‌ ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ ಎಂದು ಹೇಳಿದೆ.

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ಉನ್ನತ ಅರ್ಹತೆ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ.

ಅಂತೆಯೇ ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ (ಡಿ.ಎಡ್‌.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹಲವು ಬಾರಿ ಹೇಳಿದ್ದಾಗಿಯೂ ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

3 hours ago