ಚಿತ್ರದುರ್ಗ : ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಭೇಟಿ ನೀಡಿದ್ದ ಶಾಸಕರೊಬ್ಬರು ವಾರ್ಡ್ನ್ಗೆ ಹೊಡೆಯಿರಿ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕಾನೂನು ಪದವಿಯ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಸರಿಯಾದ ಊಟದ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹಾಸ್ಟೆಲ್ಗೆ ಭೇಟಿ ನೀಡಿದ್ದರು. ಈ ವೇಳೆ ವಿದ್ಯಾರ್ಥಿಗಳು ಕೊಳೆತ ತರಕಾರಿ ಹಾಕಿದ ಉಪಾಹಾರ, ಊಟ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಚಿತ್ರದುರ್ಗ ಶಾಸಕರು, ಇನ್ನೊಮ್ಮೆ ಈ ರೀತಿ ಕಳಪೆ ಊಟ, ಉಪಾಹಾರ ಕೊಟ್ಟರೆ ಅದನ್ನು ವಾರ್ಡನ್ಗೆ ತಿನ್ನಿಸಿ. ಬಳಿಕ ರೂಮಲ್ಲಿ ಹಾಕಿ ಚೆನ್ನಾಗಿ ಹೊಡೆಯಿರಿ. ಏನಾದರೂ ಸಮಸ್ಯೆಯಾದರೆ ನಾನಿರುತ್ತೇನೆ ಯೋಚಿಸಬೇಡಿ ಎಂದಿದ್ದಾರೆ. ಶಾಸಕರು ಹೇಳಿದ್ದಾರೆ ಎನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…