BREAKING NEWS

ಕ್ಯಾಮೆರಾ ಇಲ್ಲ ಎಂದು ಮತಾಡ್ಬಿಟ್ಟೆ, ಆದರೂ ನನ್ನ ಮಾತಿಗೆ ಬದ್ಧ: ಬಿಕೆ ಹರಿಪ್ರಸಾದ್

ಬೆಂಗಳೂರು : ಬಿಲ್ಲವ, ಈಡಿಗ ಸಮಾವೇಶದಲ್ಲಿ ನಾನು ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ಕಾದು ನೋಡಿ‌ ರಾಜಕಾರಣ ಏನೇನು ಆಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ” ಅಸಮಾಧಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಶುಕ್ರವಾರ ನಾನು ಹೇಳಿದ್ದು ನಿಜ ಒಪ್ಪಿಕೊಳ್ಳುತ್ತೇನೆ ” ಎಂದರು.

” ನಾನು ಒಂದು ಸರಿ ಹೇಳಿದ ಮಾತು ವಾಪಾಸ್ ತಗೆದುಕೊಳ್ಳೋದಿಲ್ಲ. ನಾನು ಹೇಳಿದ ಮಾತಿಗೆ ಬದ್ದನಾಗಿರುತ್ತೇನೆ.‌ ನಾನು ಹೇಳದ ಮೇಲೆ ನನ್ನ ಮಾತಲ್ಲ.‌ ಹಾಗಿದ್ದರೂ,‌ನಾನು ಹೇಳಿದ ಮೇಲೆ‌ ನನ್ನ ಮಾತಿಗೆ ಬದ್ದನಾಗಿರುತ್ತೇನೆ ” ಎಂದರು.

ಕ್ಯಾಮೆರಾ ಇರಲಿಲ್ಲ ಎಂದು ಮಾತಾಡಿದ್ದೇನೆ

ಶುಕ್ರವಾರ ಸಭೆಗೆ ಕರೆದಿದ್ದರು ಹೋಗಿದ್ದೆ ಅಷ್ಟೇ.‌ ಅಲ್ಲಿ ಕ್ಯಾಮೆರಾಗಳು ಇರಲಿಲ್ಲ ಮಾತಾಡಿದ್ದೇನೆ. ಕ್ಯಾಮೆರಾಗಳು ಇದ್ದಿದ್ದರೆ ಮಾತಾಡುತ್ತಿರಲಿಲ್ಲ. ನಾವು ಹಿಂದುಳಿದವರು ಅಷ್ಟೆಲ್ಲಾ‌ ಗಮನಿಸಿಲ್ಲ‌. ಯಾರೋ ವಿಡಿಯೋವನ್ನು ಹಾಕಿರುತ್ತಾರೆ” ಎಂದು ಹೇಳಿದರು.

ಏನಂದಿದ್ದರು ಬಿ.ಕೆ ಹರಿಪ್ರಸಾದ್?

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಬಿಕೆ ಹರಿಪ್ರಸಾದ್, ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ನನಗೆ ಸಿಎಂ ಮಾಡುವುದು ಗೊತ್ತಿದೆ. ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವುದು ಗೊತ್ತಿದೆ ಎಂದು ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದರು.

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರೂ ಒಟ್ಟಿಗೆ ಸೇರಬೇಕು ಎಂದು ನಾವು 2013 ರಲ್ಲಿ ಬೆಂಬಲ ಕೊಟ್ಟಿದ್ದೆವು. ಆದರೆ, ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚೆನ್ನಯ್ಯ ಪಾರ್ಕ್‌ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಸಿದ್ದರಾಮಯ್ಯ ಕೊಡುತ್ತೇವೆ ಎಂದು ಹೇಳಿದರೂ ಅದನ್ನು ಕೊಟ್ಟಿಲ್ಲ ಎಂದು ಆರೋಪ ಮಾಡಿದ್ದರು.

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago