BREAKING NEWS

ಬೆಂಗಳೂರು ಬಂದ್‌ʼಗೆ ಅವಕಾಶವಿಲ್ಲ: ಪೊಲೀಸ್ ಕಮಿಷನರ್ ಬಿ. ದಯಾನಂದ್

ಬೆಂಗಳೂರು : ಸೆ.26ರಂದು ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ʼʼನಾಳೆ ಬಂದ್ ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ನಾಳೆ ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಖಚಿತʼʼ ಎಂದು ಎಚ್ಚರಿಸಿದರು.

ʼʼಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸೆ.25ರ ಮಧ್ಯರಾತ್ರಿಯಿಂದ 26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಇರಲಿದೆʼʼ ಎಂದು ತಿಳಿಸಿದರು.

ʼʼ2016 ರಲ್ಲಿ ನಡೆದ ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಬಸ್ ಗಳಿಗೆ ಭದ್ರತೆ ನೀಡೋದರ ಬಗ್ಗೆಯೂ ಚರ್ಚೆ ಮಾಡಲಾಗ್ತಾ ಇದೆ, ತಮಿಳುನಾಡು ಬಸ್ ಗಳಿಗೂ ಭದ್ರತೆ ಬೇಕು ಅಂದ್ರೆ ಕೊಡುತ್ತೇವೆʼʼ ಎಂದು ಹೇಳಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago