ಬೆಂಗಳೂರು : ಬೆಂಗಳೂರು ಬಂದ್ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾವೇರಿಗಾಗಿ ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.





