BREAKING NEWS

3 ತಿಂಗಳಲ್ಲಿ 242 ಭ್ರೂಣ ಹತ್ಯೆ; ಮಂಡ್ಯ ಭ್ರೂಣ ಹತ್ಯೆ ಜಾಲದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡ ಕಮಿಷನರ್‌

ಮೊನ್ನೆ ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿತ್ತು. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಹ ಕೃತ್ಯ ಇದಾಗಿತ್ತು.

ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಿಂದ ಬೆಳಕಿಗೆ ಬಂದ ಹಲವು ವರ್ಷಗಳ ಈ ದಂಧೆಯಲ್ಲಿ ಶಾಮೀಲಾಗಿದ್ದ ಒಟ್ಟು 9 ಜನರನ್ನು ಬಂಧಿಸಲಾಗಿದೆ. ಸದ್ಯ ಇವರೆಲ್ಲಾ ಪೊಲೀಸರ ಸೆರೆಯಲ್ಲಿದ್ದು, ಈ ಕುರಿತು ಇಂದು ( ನವೆಂಬರ್‌ 28 ) ಬೆಂಗಳೂರು ನಗರ ಕಮಿಷನರ್‌ ದಯಾನಂದ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಈ ಹೇಯ ಕೃತ್ಯವೆಸಗಿರುವ ಗುಂಪು ರಿಜಿಸ್ಟರ್‌ ಒಂದನ್ನು ಬಳಸಿದ್ದು, ಇದರಲ್ಲಿ ಕಳೆದ 3 ತಿಂಗಳಿನಲ್ಲಿಯೇ ಒಟ್ಟು 242 ಹೆಣ್ಣು ಭ್ರೂಣಗಳ ಹತ್ಯೆಯನ್ನು ಮಾಡಲಾಗಿದೆ ಎಂದು ದಯಾನಂದ್‌ ಮಾಹಿತಿ ನೀಡಿದ್ದಾರೆ. ಅಲ್ಲದೇ ಒಂದು ಭ್ರೂಣ ಹತ್ಯೆಗೆ 20ರಿಂದ 25 ಸಾವಿರ ರೂಪಾಯಿ ಹಣವನ್ನು ಪಡೆಯುತ್ತಿದ್ದರು, ಮೈಸೂರಿನ ಆಸ್ಪತ್ರೆ ಹಾಗೂ ಮಂಡ್ಯದ ಆಲೆಮನೆಯಲ್ಲಿ ಆಗಿರುವುದು ಇಲ್ಲಿಯವರೆಗಿನ ತನಿಖೆಯಲ್ಲಿ ಗೊತ್ತಾಗಿದೆ ಎಂದೂ ಸಹ ಮಾಹಿತಿ ನೀಡಿದ್ದಾರೆ.

ಇನ್ನು ಈ ಪ್ರಕರಣದ ತನಿಖೆಯಲ್ಲಿ ತಮಗೆ ಎರಡು ಸ್ಕ್ಯಾನಿಂಗ್‌ ಮಷಿನ್‌ ಸಿಕ್ಕಿರುವುದಾಗಿ ಹೇಳಿದ ದಯಾನಂದ್‌ ಒಂದು ಕೆಟ್ಟಿದೆ ಹಾಗೂ ಇನ್ನೊಂದು ಚೆನ್ನಾಗಿದೆ ಎಂದಿದ್ದಾರೆ. ಈ ರೀತಿ ಸ್ಕ್ಯಾನಿಂಗ್‌ ಮಷಿನ್‌ ಅವರಿಗೆ ಲಭಿಸಿದ್ದು, ಅಂತಹ ಸಲಕರಣೆಗಳನ್ನು ಪಡೆಯಬೇಕೆಂದರೆ ಡಿಎಚ್‌ಒ ಅವರ ಅನುಮತಿ ಬೇಕಿದ್ದು ಅವರೂ ಸಹ ಇದರಲ್ಲಿ ಶಾಮೀಲಾಗಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ದಯಾನಂದ್ ಈ ಸಾಧ್ಯತೆಗಳೂ ಸಹ ಇವೆ, ಅದರ ಬಗ್ಗೆ ಮುಂದಿನ ತನಿಖೆಯಲ್ಲಿ ತಿಳಿಯಲಿದೆ ಎಂದಿದ್ದಾರೆ. ಈ ಕೃತ್ಯದಲ್ಲಿ ಸದ್ಯ ಪೊಲೀಸರ ಅತಿಥಿಯಾಗಿರುವ ವೀರೇಶ್‌ ಹಾಗೂ ಸಿದ್ದೇಶ್‌ ಎಂಬುವವರು ಮೂಲತಃ ಹೊನ್ನಾಳಿಯವರಾಗಿದ್ದು ಈ ಹಿಂದೆ ಅವರು ಕಿಡ್ನಾಪ್‌ ಕೇಸ್‌ ಒಂದರಲ್ಲಿ ಆರೋಪಿಯಾಗಿದ್ದರು ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಕಳೆದ ಮೂರು ತಿಂಗಳ ಮಾಹಿತಿ ಮೊದಲ ಹಂತದ ತನಿಖೆಯಲ್ಲಿ ಲಭಿಸಿದ್ದು ಅದರ ಹಿಂದಿನ ಕುರಿತ ತನಿಖೆ ನಡೆಯಲಿದೆ, ಎಲ್ಲಾ ಆರೋಪಿಗಳನ್ನೂ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು ವಿಚಾರಣೆ ನಡೆಯುತ್ತಿದೆ ಮತ್ತು ಕೆಲ ಪೋಷಕರನ್ನೂ ಸಹ ತನಿಖೆ ಮಾಡಲಿದ್ದೇವೆ ಎಂದು ದಯಾನಂದ್‌ ತಿಳಿಸಿದ್ದಾರೆ.

andolana

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

6 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

7 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

7 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

7 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

7 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

8 hours ago