BREAKING NEWS

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಶುಲ್ಕ ಜುಲೈ 1ರಿಂದ ಮತ್ತಷ್ಟು ಹೆಚ್ಚಳ

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಓಡಾಡುವವರು ಜುಲೈ 1ರಿಂದ ಹೆಚ್ಚಿನ ಟೋಲ್ ದರ ಪಾವತಿಸಬೇಕಾಗುತ್ತದೆ. ಕಾರಿನಲ್ಲಿ ಸಂಚರಿಸುವವರು ಏಕಮುಖ ಸಂಚಾರಕ್ಕೆ 320 ರೂಪಾಯಿ ಹಾಗೂ ಪ್ರಯಾಣಿಕರು 24 ತಾಸಿನೊಳಗೆ ಹಿಂತಿರುಗುವುದಾದರೆ ದ್ವಿಮುಖ ಸಂಚಾರಕ್ಕೆ 485 ರೂಪಾಯಿ ಪಾವತಿಸಬೇಕಾಗುತ್ತದೆ. ಇದು ನಾಳೆ ಬೆಳಗ್ಗೆ 8 ಗಂಟೆಯಿಂದ ಜಾರಿಗೆ ಬರಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೈಸೂರು ಮತ್ತು ನಿಡಘಟ್ಟ ನಡುವೆ ಮದ್ದೂರಿನಲ್ಲಿ ಟೋಲ್ ಸಂಗ್ರಹಕ್ಕೆ ನಿರ್ಧಾರ ಮಾಡಿದ ನಂತರ ಟೋಲ್ ಶುಲ್ಕ ಹೆಚ್ಚಳವಾಗಿದೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಇದು ಎರಡನೇ ಟೋಲ್ ಪ್ಲಾಜಾವಾಗಿದೆ. ಈಗಿರುವ ಶೇಷಗಿರಿಹಳ್ಳಿ ಟೋಲ್ ಪ್ಲಾಜಾದಲ್ಲಿ ಏಕಮುಖ ಸಂಚಾರಕ್ಕೆ ಕಾರುಗಳಿಗೆ 165 ರೂಪಾಯಿ ಪಾವತಿಸಬೇಕಾಗುತ್ತದೆ.

ಎರಡನೇ ಟೋಲ್ ಪ್ಲಾಜಾದಲ್ಲಿ​ ಯಾವ ವಾಹನಕ್ಕೆ ಎಷ್ಟು ಟೋಲ್ ದರ? : ಎನ್ ಹೆಚ್ ಎಐ ಅಧಿಸೂಚನೆ ಪ್ರಕಾರ, ವಿವಿಧ ವಾಹನಗಳಿಗೆ ಟೋಲ್ ಶುಲ್ಕ ಈ ರೀತಿ ಇದೆ. ಕಾರುಗಳು, ಎಸ್ ಯುವಿಗಳು, ವ್ಯಾನ್ ಗಳಿಗೆ ಏಕಮುಖ ಸಂಚಾರಕ್ಕೆ ಟೋಲ್ ದರ 155 ರೂಪಾಯಿಗಳಾದರೆ 24 ಗಂಟೆಯೊಳಗೆ ದ್ವಿಮುಖ ಸಂಚಾರಕ್ಕೆ 235 ರೂಪಾಯಿ ಶುಲ್ಕ ತೆರಬೇಕಾಗುತ್ತದೆ.

ಎಲ್‌ಸಿವಿ/ಎಲ್‌ಜಿವಿ/ಮಿನಿ ಬಸ್‌ಗಳಿಗೆ ಏಕಮುಖ ಪ್ರಯಾಣಕ್ಕೆ 235 ರೂಪಾಯಿ ಮತ್ತು 24 ಗಂಟೆಗಳ ಒಳಗೆ ಹಿಂದಿರುಗಲು 375 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಎರಡು ಆಕ್ಸಲ್‌ಗಳನ್ನು ಹೊಂದಿರುವ ಟ್ರಕ್‌ಗಳು/ಬಸ್‌ಗಳು ಏಕಮುಖ ಪ್ರಯಾಣಕ್ಕೆ 525 ರೂಪಾಯಿ ಮತ್ತು 24 ಗಂಟೆಗಳ ಒಳಗೆ ಹಿಂತಿರುಗಿದರೆ 790 ಪಾವತಿಸಬೇಕಾಗುತ್ತದೆ. ಈ ಹೊಸ ಟೋಲ್ ಬೆಂಗಳೂರು-ನಿಡಘಟ್ಟ ಮಾರ್ಗದಲ್ಲಿ ಅಸ್ತಿತ್ವದಲ್ಲಿರುವ ಟೋಲ್ ಶುಲ್ಕಕ್ಕೆ ಹೆಚ್ಚುವರಿಯಾಗಿದೆ ಟೋಲ್ ಪ್ಲಾಜಾದಿಂದ 20 ಕಿಮೀ ವ್ಯಾಪ್ತಿಯೊಳಗೆ ಪ್ರಯಾಣಿಸುವ ವಾಣಿಜ್ಯೇತರ ವಾಹನಗಳಿಗೆ 330 ರೂಪಾಯಿ ಬೆಲೆಯ ಮಾಸಿಕ ಪಾಸ್ ನ್ನು NHAI ಒದಗಿಸುತ್ತದೆ.

ಇತ್ತೀಚೆಗಷ್ಟೇ ಹಲವು ಕನ್ನಡ ಪರ ಸಂಘಟನೆಗಳು ಟೋಲ್ ದರ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಆಗಾಗ್ಗೆ ರಸ್ತೆ ಅಪಘಾತಗಳು ಮತ್ತು ಸಾವುಗಳಿಂದಾಗಿ ಚರ್ಚೆಯ ಬಿಂದುವಾಗಿರುವ ಸಮಯದಲ್ಲಿ ಟೋಲ್ ಶುಲ್ಕ ಕೂಡ ಹೆಚ್ಚಳವಾಗಿದೆ.

ಕಳೆದ ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯೋಜನೆಯನ್ನು ಉದ್ಘಾಟಿಸಿದರು. ಎಕ್ಸ್‌ಪ್ರೆಸ್‌ವೇ ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು ಮೂರು ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆ ಮಾಡುತ್ತದೆ.

117 ಕಿಲೋ ಮೀಟರ್ ರಸ್ತೆಯನ್ನು ಎರಡು ಹಂತದಲ್ಲಿ 8,408 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟು 117 ಕಿಮೀ ಉದ್ದದಲ್ಲಿ, 52 ಕಿಮೀ ಗ್ರೀನ್‌ಫೀಲ್ಡ್ ಐದು ಬೈಪಾಸ್‌ಗಳನ್ನು ಒಳಗೊಂಡಿದೆ.

lokesh

Recent Posts

ಲಾರಿ-ಬೈಕ್ ಮುಖಾಮುಖಿ ಢಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು

ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…

7 mins ago

ಸರ್ಕಾರಕ್ಕೆ ಡೆಡ್‌ಲೈನ್‌ ನೀಡಿ ಮುಷ್ಕರ ವಾಪಾಸ್‌ ಪಡೆದ ಸಾರಿಗೆ ನೌಕರರು

ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…

21 mins ago

ಮಾ.23ರಿಂದ ಏ.5 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…

31 mins ago

ಜೆಫ್ರಿ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆ್ಯಂಡ್ರೂ ಬಂಧನ

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…

1 hour ago

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

2 hours ago