BREAKING NEWS

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಶುಲ್ಕ ಜುಲೈ 1ರಿಂದ ಮತ್ತಷ್ಟು ಹೆಚ್ಚಳ

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಓಡಾಡುವವರು ಜುಲೈ 1ರಿಂದ ಹೆಚ್ಚಿನ ಟೋಲ್ ದರ ಪಾವತಿಸಬೇಕಾಗುತ್ತದೆ. ಕಾರಿನಲ್ಲಿ ಸಂಚರಿಸುವವರು ಏಕಮುಖ ಸಂಚಾರಕ್ಕೆ 320 ರೂಪಾಯಿ ಹಾಗೂ ಪ್ರಯಾಣಿಕರು 24 ತಾಸಿನೊಳಗೆ ಹಿಂತಿರುಗುವುದಾದರೆ ದ್ವಿಮುಖ ಸಂಚಾರಕ್ಕೆ 485 ರೂಪಾಯಿ ಪಾವತಿಸಬೇಕಾಗುತ್ತದೆ. ಇದು ನಾಳೆ ಬೆಳಗ್ಗೆ 8 ಗಂಟೆಯಿಂದ ಜಾರಿಗೆ ಬರಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೈಸೂರು ಮತ್ತು ನಿಡಘಟ್ಟ ನಡುವೆ ಮದ್ದೂರಿನಲ್ಲಿ ಟೋಲ್ ಸಂಗ್ರಹಕ್ಕೆ ನಿರ್ಧಾರ ಮಾಡಿದ ನಂತರ ಟೋಲ್ ಶುಲ್ಕ ಹೆಚ್ಚಳವಾಗಿದೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಇದು ಎರಡನೇ ಟೋಲ್ ಪ್ಲಾಜಾವಾಗಿದೆ. ಈಗಿರುವ ಶೇಷಗಿರಿಹಳ್ಳಿ ಟೋಲ್ ಪ್ಲಾಜಾದಲ್ಲಿ ಏಕಮುಖ ಸಂಚಾರಕ್ಕೆ ಕಾರುಗಳಿಗೆ 165 ರೂಪಾಯಿ ಪಾವತಿಸಬೇಕಾಗುತ್ತದೆ.

ಎರಡನೇ ಟೋಲ್ ಪ್ಲಾಜಾದಲ್ಲಿ​ ಯಾವ ವಾಹನಕ್ಕೆ ಎಷ್ಟು ಟೋಲ್ ದರ? : ಎನ್ ಹೆಚ್ ಎಐ ಅಧಿಸೂಚನೆ ಪ್ರಕಾರ, ವಿವಿಧ ವಾಹನಗಳಿಗೆ ಟೋಲ್ ಶುಲ್ಕ ಈ ರೀತಿ ಇದೆ. ಕಾರುಗಳು, ಎಸ್ ಯುವಿಗಳು, ವ್ಯಾನ್ ಗಳಿಗೆ ಏಕಮುಖ ಸಂಚಾರಕ್ಕೆ ಟೋಲ್ ದರ 155 ರೂಪಾಯಿಗಳಾದರೆ 24 ಗಂಟೆಯೊಳಗೆ ದ್ವಿಮುಖ ಸಂಚಾರಕ್ಕೆ 235 ರೂಪಾಯಿ ಶುಲ್ಕ ತೆರಬೇಕಾಗುತ್ತದೆ.

ಎಲ್‌ಸಿವಿ/ಎಲ್‌ಜಿವಿ/ಮಿನಿ ಬಸ್‌ಗಳಿಗೆ ಏಕಮುಖ ಪ್ರಯಾಣಕ್ಕೆ 235 ರೂಪಾಯಿ ಮತ್ತು 24 ಗಂಟೆಗಳ ಒಳಗೆ ಹಿಂದಿರುಗಲು 375 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಎರಡು ಆಕ್ಸಲ್‌ಗಳನ್ನು ಹೊಂದಿರುವ ಟ್ರಕ್‌ಗಳು/ಬಸ್‌ಗಳು ಏಕಮುಖ ಪ್ರಯಾಣಕ್ಕೆ 525 ರೂಪಾಯಿ ಮತ್ತು 24 ಗಂಟೆಗಳ ಒಳಗೆ ಹಿಂತಿರುಗಿದರೆ 790 ಪಾವತಿಸಬೇಕಾಗುತ್ತದೆ. ಈ ಹೊಸ ಟೋಲ್ ಬೆಂಗಳೂರು-ನಿಡಘಟ್ಟ ಮಾರ್ಗದಲ್ಲಿ ಅಸ್ತಿತ್ವದಲ್ಲಿರುವ ಟೋಲ್ ಶುಲ್ಕಕ್ಕೆ ಹೆಚ್ಚುವರಿಯಾಗಿದೆ ಟೋಲ್ ಪ್ಲಾಜಾದಿಂದ 20 ಕಿಮೀ ವ್ಯಾಪ್ತಿಯೊಳಗೆ ಪ್ರಯಾಣಿಸುವ ವಾಣಿಜ್ಯೇತರ ವಾಹನಗಳಿಗೆ 330 ರೂಪಾಯಿ ಬೆಲೆಯ ಮಾಸಿಕ ಪಾಸ್ ನ್ನು NHAI ಒದಗಿಸುತ್ತದೆ.

ಇತ್ತೀಚೆಗಷ್ಟೇ ಹಲವು ಕನ್ನಡ ಪರ ಸಂಘಟನೆಗಳು ಟೋಲ್ ದರ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಆಗಾಗ್ಗೆ ರಸ್ತೆ ಅಪಘಾತಗಳು ಮತ್ತು ಸಾವುಗಳಿಂದಾಗಿ ಚರ್ಚೆಯ ಬಿಂದುವಾಗಿರುವ ಸಮಯದಲ್ಲಿ ಟೋಲ್ ಶುಲ್ಕ ಕೂಡ ಹೆಚ್ಚಳವಾಗಿದೆ.

ಕಳೆದ ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯೋಜನೆಯನ್ನು ಉದ್ಘಾಟಿಸಿದರು. ಎಕ್ಸ್‌ಪ್ರೆಸ್‌ವೇ ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು ಮೂರು ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆ ಮಾಡುತ್ತದೆ.

117 ಕಿಲೋ ಮೀಟರ್ ರಸ್ತೆಯನ್ನು ಎರಡು ಹಂತದಲ್ಲಿ 8,408 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟು 117 ಕಿಮೀ ಉದ್ದದಲ್ಲಿ, 52 ಕಿಮೀ ಗ್ರೀನ್‌ಫೀಲ್ಡ್ ಐದು ಬೈಪಾಸ್‌ಗಳನ್ನು ಒಳಗೊಂಡಿದೆ.

lokesh

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

4 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

5 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

5 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

5 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

6 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

7 hours ago