BREAKING NEWS

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಶುಲ್ಕ ಜುಲೈ 1ರಿಂದ ಮತ್ತಷ್ಟು ಹೆಚ್ಚಳ

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಓಡಾಡುವವರು ಜುಲೈ 1ರಿಂದ ಹೆಚ್ಚಿನ ಟೋಲ್ ದರ ಪಾವತಿಸಬೇಕಾಗುತ್ತದೆ. ಕಾರಿನಲ್ಲಿ ಸಂಚರಿಸುವವರು ಏಕಮುಖ ಸಂಚಾರಕ್ಕೆ 320 ರೂಪಾಯಿ ಹಾಗೂ ಪ್ರಯಾಣಿಕರು 24 ತಾಸಿನೊಳಗೆ ಹಿಂತಿರುಗುವುದಾದರೆ ದ್ವಿಮುಖ ಸಂಚಾರಕ್ಕೆ 485 ರೂಪಾಯಿ ಪಾವತಿಸಬೇಕಾಗುತ್ತದೆ. ಇದು ನಾಳೆ ಬೆಳಗ್ಗೆ 8 ಗಂಟೆಯಿಂದ ಜಾರಿಗೆ ಬರಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೈಸೂರು ಮತ್ತು ನಿಡಘಟ್ಟ ನಡುವೆ ಮದ್ದೂರಿನಲ್ಲಿ ಟೋಲ್ ಸಂಗ್ರಹಕ್ಕೆ ನಿರ್ಧಾರ ಮಾಡಿದ ನಂತರ ಟೋಲ್ ಶುಲ್ಕ ಹೆಚ್ಚಳವಾಗಿದೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಇದು ಎರಡನೇ ಟೋಲ್ ಪ್ಲಾಜಾವಾಗಿದೆ. ಈಗಿರುವ ಶೇಷಗಿರಿಹಳ್ಳಿ ಟೋಲ್ ಪ್ಲಾಜಾದಲ್ಲಿ ಏಕಮುಖ ಸಂಚಾರಕ್ಕೆ ಕಾರುಗಳಿಗೆ 165 ರೂಪಾಯಿ ಪಾವತಿಸಬೇಕಾಗುತ್ತದೆ.

ಎರಡನೇ ಟೋಲ್ ಪ್ಲಾಜಾದಲ್ಲಿ​ ಯಾವ ವಾಹನಕ್ಕೆ ಎಷ್ಟು ಟೋಲ್ ದರ? : ಎನ್ ಹೆಚ್ ಎಐ ಅಧಿಸೂಚನೆ ಪ್ರಕಾರ, ವಿವಿಧ ವಾಹನಗಳಿಗೆ ಟೋಲ್ ಶುಲ್ಕ ಈ ರೀತಿ ಇದೆ. ಕಾರುಗಳು, ಎಸ್ ಯುವಿಗಳು, ವ್ಯಾನ್ ಗಳಿಗೆ ಏಕಮುಖ ಸಂಚಾರಕ್ಕೆ ಟೋಲ್ ದರ 155 ರೂಪಾಯಿಗಳಾದರೆ 24 ಗಂಟೆಯೊಳಗೆ ದ್ವಿಮುಖ ಸಂಚಾರಕ್ಕೆ 235 ರೂಪಾಯಿ ಶುಲ್ಕ ತೆರಬೇಕಾಗುತ್ತದೆ.

ಎಲ್‌ಸಿವಿ/ಎಲ್‌ಜಿವಿ/ಮಿನಿ ಬಸ್‌ಗಳಿಗೆ ಏಕಮುಖ ಪ್ರಯಾಣಕ್ಕೆ 235 ರೂಪಾಯಿ ಮತ್ತು 24 ಗಂಟೆಗಳ ಒಳಗೆ ಹಿಂದಿರುಗಲು 375 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಎರಡು ಆಕ್ಸಲ್‌ಗಳನ್ನು ಹೊಂದಿರುವ ಟ್ರಕ್‌ಗಳು/ಬಸ್‌ಗಳು ಏಕಮುಖ ಪ್ರಯಾಣಕ್ಕೆ 525 ರೂಪಾಯಿ ಮತ್ತು 24 ಗಂಟೆಗಳ ಒಳಗೆ ಹಿಂತಿರುಗಿದರೆ 790 ಪಾವತಿಸಬೇಕಾಗುತ್ತದೆ. ಈ ಹೊಸ ಟೋಲ್ ಬೆಂಗಳೂರು-ನಿಡಘಟ್ಟ ಮಾರ್ಗದಲ್ಲಿ ಅಸ್ತಿತ್ವದಲ್ಲಿರುವ ಟೋಲ್ ಶುಲ್ಕಕ್ಕೆ ಹೆಚ್ಚುವರಿಯಾಗಿದೆ ಟೋಲ್ ಪ್ಲಾಜಾದಿಂದ 20 ಕಿಮೀ ವ್ಯಾಪ್ತಿಯೊಳಗೆ ಪ್ರಯಾಣಿಸುವ ವಾಣಿಜ್ಯೇತರ ವಾಹನಗಳಿಗೆ 330 ರೂಪಾಯಿ ಬೆಲೆಯ ಮಾಸಿಕ ಪಾಸ್ ನ್ನು NHAI ಒದಗಿಸುತ್ತದೆ.

ಇತ್ತೀಚೆಗಷ್ಟೇ ಹಲವು ಕನ್ನಡ ಪರ ಸಂಘಟನೆಗಳು ಟೋಲ್ ದರ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಆಗಾಗ್ಗೆ ರಸ್ತೆ ಅಪಘಾತಗಳು ಮತ್ತು ಸಾವುಗಳಿಂದಾಗಿ ಚರ್ಚೆಯ ಬಿಂದುವಾಗಿರುವ ಸಮಯದಲ್ಲಿ ಟೋಲ್ ಶುಲ್ಕ ಕೂಡ ಹೆಚ್ಚಳವಾಗಿದೆ.

ಕಳೆದ ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯೋಜನೆಯನ್ನು ಉದ್ಘಾಟಿಸಿದರು. ಎಕ್ಸ್‌ಪ್ರೆಸ್‌ವೇ ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು ಮೂರು ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆ ಮಾಡುತ್ತದೆ.

117 ಕಿಲೋ ಮೀಟರ್ ರಸ್ತೆಯನ್ನು ಎರಡು ಹಂತದಲ್ಲಿ 8,408 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟು 117 ಕಿಮೀ ಉದ್ದದಲ್ಲಿ, 52 ಕಿಮೀ ಗ್ರೀನ್‌ಫೀಲ್ಡ್ ಐದು ಬೈಪಾಸ್‌ಗಳನ್ನು ಒಳಗೊಂಡಿದೆ.

lokesh

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

9 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

10 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

11 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

11 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

12 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

13 hours ago