BREAKING NEWS

ಚುನಾವಣೆ ದಿನಾಂಕ ಪ್ರಕಟ: ರಾಜ್ಯದಲ್ಲಿ ಪ್ರಗತಿಪರ ಅಲೆ ಶುರುವಾಗಿದೆ – ಡಿಕೆಶಿ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ.
ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.

ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಈಗ ಕರ್ನಾಟಕದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದ್ದು, ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ, ಈ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ನೀಡಲು ಸಜ್ಜಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬರಲಿದೆ.
ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.
ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.
80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.
ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.
https://twitter.com/DKShivakumar/status/1640978419445022720?ref_src=twsrc%5Etfw%7Ctwcamp%5Etweetembed%7Ctwterm%5E1640978419445022720%7Ctwgr%5E137c3ed068d304e62a8e277de86701cea8c27081%7Ctwcon%5Es1_&ref_

lokesh

Recent Posts

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

5 mins ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

17 mins ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

37 mins ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

54 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

60 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

1 hour ago