BREAKING NEWS

ಚುನಾವಣೆ ದಿನಾಂಕ ಪ್ರಕಟ: ರಾಜ್ಯದಲ್ಲಿ ಪ್ರಗತಿಪರ ಅಲೆ ಶುರುವಾಗಿದೆ – ಡಿಕೆಶಿ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ.
ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.

ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಈಗ ಕರ್ನಾಟಕದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದ್ದು, ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ, ಈ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ನೀಡಲು ಸಜ್ಜಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬರಲಿದೆ.
ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.
ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.
80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.
ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.
https://twitter.com/DKShivakumar/status/1640978419445022720?ref_src=twsrc%5Etfw%7Ctwcamp%5Etweetembed%7Ctwterm%5E1640978419445022720%7Ctwgr%5E137c3ed068d304e62a8e277de86701cea8c27081%7Ctwcon%5Es1_&ref_

lokesh

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

23 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

23 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

23 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

23 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

23 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

24 hours ago