ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಪೈಕಿ ‘ಎ++’ ಶ್ರೇಣಿ ಪಡೆದ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದಲ್ಲಿ ಜೆಎನ್ಯು ನಂತರ ಈ ಸಾಧನೆ ಮಾಡಿದ ಸರ್ಕಾರಿ ವಿಶ್ವವಿದ್ಯಾಲಯವಾಗಿದೆ ಎಂದು ಬೆಂಗಳೂರು ವಿವಿ ಕುಲಪತಿ ಡಾ. ಎಸ್.ಎಂ. ಜಯಕರ್ ತಿಳಿಸಿದರು.
ಜ್ಞಾನಜ್ಯೋತಿ ಸಭಾಂಗಣದದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಹಂಚಿಕೊಂಡ ಅವರು, ದೇಶದಲ್ಲಿಯೇ ಮೊದಲ ಡಿಜಿಟಲ್ ಮೌಲ್ಯಮಾಪನ ಕೇಂದ್ರ, ಪಠ್ಯಕ್ರಮ, ಬೋಧನೆ ಹಾಗೂ ಕಲಿಕೆ, ಮೌಲ್ಯಮಾಪನ, ಸಂಶೋಧನೆ, ಮೂಲಸೌಕರ್ಯ, ಕಲಿಕಾ ಸಂಪನ್ಮೂಲ, ವಿದ್ಯಾರ್ಥಿಗಳ ಪ್ರಗತಿ, ಆಡಳಿತ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಹೊಂದಿರುವ ಬೆಂಗಳೂರು ವಿಶ್ವವಿದ್ಯಾಲಯವು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯಿಂದ (ನ್ಯಾಕ್) ‘ಎ++’ ಶ್ರೇಣಿ ಪಡೆದಿದೆ ಎಂದರು.
ವಿವಿಯು 2018ರಿಂದ 2022ರ ವರೆಗಿನ ಮೌಲ್ಯಮಾಪನಾ ಅವಧಿಯ ಸ್ವಯಂಅಧ್ಯಯನ ವರದಿಯನ್ನು ನ್ಯಾಕ್ಗೆ ಸಲ್ಲಿಸಿತ್ತು. ಕೆಲವೇ ಕೆಲವು ಶೈಕ್ಷಣಿಕ ಸಂಸ್ಥೆಗಳು 4ನೇ ಆವೃತ್ತಿಯಲ್ಲಿ ನ್ಯಾಕ್ನಿಂದ ಮಾನ್ಯತೆ ಪಡೆದಿವೆ. ಈ ಮೂಲಕ ವಿವಿ ಸಂಪೂರ್ಣ ಸ್ವಾಯತ್ತತೆ ಪಡೆಯುವ ಅವಕಾಶ ಹೊಂದಿದೆ ಎಂದು ಹೇಳಿದರು.
4ರಲ್ಲಿ 3.75 ಅಂಕ: ಎ++ ಶ್ರೇಣಿ ಪಡೆಯಲು ನ್ಯಾಕ್ ನಿಗದಿ ಮಾಡಿದ್ದ ವಿವಿಧ 7 ಮಾನದಂಡಗಳಾದ ಪಠ್ಯಕ್ರಮ, ಬೋಧನೆ ಹಾಗೂ ಕಲಿಕೆ, ಮೌಲ್ಯಮಾಪನೆ, ಸಂಶೋಧನೆ, ಮೂಲಸೌಕರ್ಯ, ಕಲಿಕಾ ಸಂಪನ್ಮೂಲ, ವಿದ್ಯಾರ್ಥಿಗಳ ಪ್ರಗತಿ, ಆಡಳಿತ ಮತ್ತು ನಿರ್ವಹಣೆ, ಸಾಂಸ್ಥಿಕ ಮೌಲ್ಯಗಳು ಮತ್ತು ಉತ್ತಮ ಅಭ್ಯಾಸಗಳಲ್ಲಿ ವಿವಿಯು 4 ಅಂಕಗಳಲ್ಲಿ ಸರಾಸರಿ 3.75 ಅಂಕ ಗಳಿಸುವ ಮೂಲಕ ಅತ್ಯುತ್ತಮ ಸಾಧನೆಗೈದಿದೆ ಎಂದು ವಿವರಿಸಿದರು.
ಕಳೆದ 5 ವರ್ಷಗಳಲ್ಲಿ ಶೈಕ್ಷಣಿಕ ಮತ್ತು ಮೂಲ ಸೌಕರ್ಯದಲ್ಲಿ ವಿವಿಯು ಉತ್ಕೃಷ್ಟತೆ ಸಾಧಿಸಿದೆ. ಹಿಂದಿನ 2 ಆವೃತ್ತಿಗಳಲ್ಲಿ 3.16 ಸಿಜಿಪಿಎ ಅಂಕಗಳೊಂದಿಗೆ ಮಾನ್ಯತಾ ಮಂಡಳಿಯಿಂದ ‘ಎ’ ಶ್ರೇಣಿ ಪಡೆದಿತ್ತು. ಹಲವು ಆಯಾಮಗಳಲ್ಲಿ ತನ್ನ ಕಾರ್ಯದಕ್ಷತೆ ಹೆಚ್ಚಿಸಿಕೊಂಡಿರುವ ವಿವಿಯು ‘ಎ++’ ಶ್ರೇಣಿಯನ್ನು ಗಳಿಸಲು ಸಾಧ್ಯವಾಗಿದೆ ಎಂದರು.
ಡಿಜಿಟಲ್ ಮೌಲ್ಯಮಾಪನ ಕೇಂದ್ರ: ವಿವಿಯಲ್ಲಿರುವ ಡಿಜಿಟಲ್ ಮೌಲ್ಯಮಾಪನಾ ಕೇಂದ್ರವು ಸರ್ಕಾರಿ ವಿವಿಗಳ ಮಟ್ಟಿಗೆ ದೇಶದಲ್ಲಿಯೇ ಮೊದಲ ಡಿಜಿಟಲ್ ಮೌಲ್ಯಮಾಪನಾ ಕೇಂದ್ರವಾಗಿದೆ. ಇದರ ಜತೆಗೆ ಕಳೆದ 5 ವರ್ಷಗಳಲ್ಲಿ ಶೇ.83 ಪಠ್ಯಕ್ರಮವನ್ನು ಪರಷ್ಕರಣೆ ಮಾಡಲಾಗಿದೆ. 108 ಯುಜಿ ಮತ್ತು ಪಿಜಿ ಕೋರ್ಸ್ಗಳಿದ್ದು, ಇದರಲ್ಲಿ 32 ಕೋರ್ಸ್ಗಳನ್ನು ಹೊಸದಾಗಿ ಆರಂಭಿಸಲಾಗಿದೆ. 42 ಪಿಎಚ್.ಡಿ ಕೋರ್ಸ್ಗಳನ್ನು ನಡೆಸಲಾಗುತ್ತಿದೆ ಎಂದರು.
53 ಪೇಟೆಂಟ್ಗಳು, ಶೇ.92 ಬೋಧನಾ ಸಿಬ್ಬಂದಿಯು ಪಿಎಚ್.ಡಿ ಪದವಿ ಹೊಂದಿದ್ದಾರೆ. ಕಳೆದ 20 ವರ್ಷಗಳಿಂದ ಕಾಯಂ ಸಿಬ್ಬಂದಿ ಬೋಧನೆ, 5 ವರ್ಷಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚಿನ ಪಿ.ಎಚ್.ಡಿ. ಮಂಡನೆಯಾಗಿವೆ ಎಂದು ಹೇಳಿದರು.
136 ಕೋಟಿ ರೂ. ಸಂಶೋಧನಾ ಅನುದಾನ: ವಿವಿಯಲ್ಲಿ ಸಂಶೋಧನಾ ಚಟುವಟಿಕೆಗಳನ್ನು ಕೈಗೊಳ್ಳಲು ದೇಶದ ಪ್ರತಿಷ್ಠಿತ ಸಂಸ್ಥೆಗಳಾದ ಐಸಿಎಂಆರ್, ಐಸಿಎಸ್ಆರ್ ಸೇರಿ ವಿವಿಧ ಸಂಸ್ಥೆಗಳಿಂದ 136 ಕೋಟಿ ರೂ. ಸಂಶೋಧನಾ ಅನುದಾನ ಬಂದಿದೆ. ವಿವಿಧ ನಾಗರಿಕ ಸೇವೆ ಮತ್ತು ಪರಿಸರಕ್ಕೆ ಸಂಬಂಧಿಸಿದ ಕಾರ್ಯಕ್ಕೆ 4 ಕೋಟಿ ರೂ. ಅನುದಾನ ಬಂದಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿವಿ ಕುಲಸಚಿವ ಡಾ.ಸಿ. ಶ್ರೀನಿವಾಸ್, ವಿತ್ತಾಧಿಕಾರಿ ಅಜಿತ್ ಕುಮಾರ್ ಹೆಗಡೆ ಉಪಸ್ಥಿತರಿದ್ದರು.
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…