BREAKING NEWS

ನ್ಯಾಕ್ ಎ++ ಶ್ರೇಣಿ ಪಡೆದ ಬೆಂಗಳೂರು ವಿವಿ: ರಾಜ್ಯದ ಏಕೈಕ, ದೇಶದ ಎರಡನೇ ಸರ್ಕಾರಿ ವಿವಿ ಎಂಬ ಹೆಗ್ಗಳಿಕೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಪೈಕಿ ‘ಎ++’ ಶ್ರೇಣಿ ಪಡೆದ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದಲ್ಲಿ ಜೆಎನ್‌ಯು ನಂತರ ಈ ಸಾಧನೆ ಮಾಡಿದ ಸರ್ಕಾರಿ ವಿಶ್ವವಿದ್ಯಾಲಯವಾಗಿದೆ ಎಂದು ಬೆಂಗಳೂರು ವಿವಿ ಕುಲಪತಿ ಡಾ. ಎಸ್.ಎಂ. ಜಯಕರ್ ತಿಳಿಸಿದರು.

ಜ್ಞಾನಜ್ಯೋತಿ ಸಭಾಂಗಣದದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಹಂಚಿಕೊಂಡ ಅವರು, ದೇಶದಲ್ಲಿಯೇ ಮೊದಲ ಡಿಜಿಟಲ್ ಮೌಲ್ಯಮಾಪನ ಕೇಂದ್ರ, ಪಠ್ಯಕ್ರಮ, ಬೋಧನೆ ಹಾಗೂ ಕಲಿಕೆ, ಮೌಲ್ಯಮಾಪನ, ಸಂಶೋಧನೆ, ಮೂಲಸೌಕರ್ಯ, ಕಲಿಕಾ ಸಂಪನ್ಮೂಲ, ವಿದ್ಯಾರ್ಥಿಗಳ ಪ್ರಗತಿ, ಆಡಳಿತ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಹೊಂದಿರುವ ಬೆಂಗಳೂರು ವಿಶ್ವವಿದ್ಯಾಲಯವು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯಿಂದ (ನ್ಯಾಕ್) ‘ಎ++’ ಶ್ರೇಣಿ ಪಡೆದಿದೆ ಎಂದರು.

ವಿವಿಯು 2018ರಿಂದ 2022ರ ವರೆಗಿನ ಮೌಲ್ಯಮಾಪನಾ ಅವಧಿಯ ಸ್ವಯಂಅಧ್ಯಯನ ವರದಿಯನ್ನು ನ್ಯಾಕ್‌ಗೆ ಸಲ್ಲಿಸಿತ್ತು. ಕೆಲವೇ ಕೆಲವು ಶೈಕ್ಷಣಿಕ ಸಂಸ್ಥೆಗಳು 4ನೇ ಆವೃತ್ತಿಯಲ್ಲಿ ನ್ಯಾಕ್‌ನಿಂದ ಮಾನ್ಯತೆ ಪಡೆದಿವೆ. ಈ ಮೂಲಕ ವಿವಿ ಸಂಪೂರ್ಣ ಸ್ವಾಯತ್ತತೆ ಪಡೆಯುವ ಅವಕಾಶ ಹೊಂದಿದೆ ಎಂದು ಹೇಳಿದರು.

4ರಲ್ಲಿ 3.75 ಅಂಕ: ಎ++ ಶ್ರೇಣಿ ಪಡೆಯಲು ನ್ಯಾಕ್ ನಿಗದಿ ಮಾಡಿದ್ದ ವಿವಿಧ 7 ಮಾನದಂಡಗಳಾದ ಪಠ್ಯಕ್ರಮ, ಬೋಧನೆ ಹಾಗೂ ಕಲಿಕೆ, ಮೌಲ್ಯಮಾಪನೆ, ಸಂಶೋಧನೆ, ಮೂಲಸೌಕರ್ಯ, ಕಲಿಕಾ ಸಂಪನ್ಮೂಲ, ವಿದ್ಯಾರ್ಥಿಗಳ ಪ್ರಗತಿ, ಆಡಳಿತ ಮತ್ತು ನಿರ್ವಹಣೆ, ಸಾಂಸ್ಥಿಕ ಮೌಲ್ಯಗಳು ಮತ್ತು ಉತ್ತಮ ಅಭ್ಯಾಸಗಳಲ್ಲಿ ವಿವಿಯು 4 ಅಂಕಗಳಲ್ಲಿ ಸರಾಸರಿ 3.75 ಅಂಕ ಗಳಿಸುವ ಮೂಲಕ ಅತ್ಯುತ್ತಮ ಸಾಧನೆಗೈದಿದೆ ಎಂದು ವಿವರಿಸಿದರು.

ಕಳೆದ 5 ವರ್ಷಗಳಲ್ಲಿ ಶೈಕ್ಷಣಿಕ ಮತ್ತು ಮೂಲ ಸೌಕರ್ಯದಲ್ಲಿ ವಿವಿಯು ಉತ್ಕೃಷ್ಟತೆ ಸಾಧಿಸಿದೆ. ಹಿಂದಿನ 2 ಆವೃತ್ತಿಗಳಲ್ಲಿ 3.16 ಸಿಜಿಪಿಎ ಅಂಕಗಳೊಂದಿಗೆ ಮಾನ್ಯತಾ ಮಂಡಳಿಯಿಂದ ‘ಎ’ ಶ್ರೇಣಿ ಪಡೆದಿತ್ತು. ಹಲವು ಆಯಾಮಗಳಲ್ಲಿ ತನ್ನ ಕಾರ್ಯದಕ್ಷತೆ ಹೆಚ್ಚಿಸಿಕೊಂಡಿರುವ ವಿವಿಯು ‘ಎ++’ ಶ್ರೇಣಿಯನ್ನು ಗಳಿಸಲು ಸಾಧ್ಯವಾಗಿದೆ ಎಂದರು.

ಡಿಜಿಟಲ್ ಮೌಲ್ಯಮಾಪನ ಕೇಂದ್ರ: ವಿವಿಯಲ್ಲಿರುವ ಡಿಜಿಟಲ್ ಮೌಲ್ಯಮಾಪನಾ ಕೇಂದ್ರವು ಸರ್ಕಾರಿ ವಿವಿಗಳ ಮಟ್ಟಿಗೆ ದೇಶದಲ್ಲಿಯೇ ಮೊದಲ ಡಿಜಿಟಲ್ ಮೌಲ್ಯಮಾಪನಾ ಕೇಂದ್ರವಾಗಿದೆ. ಇದರ ಜತೆಗೆ ಕಳೆದ 5 ವರ್ಷಗಳಲ್ಲಿ ಶೇ.83 ಪಠ್ಯಕ್ರಮವನ್ನು ಪರಷ್ಕರಣೆ ಮಾಡಲಾಗಿದೆ. 108 ಯುಜಿ ಮತ್ತು ಪಿಜಿ ಕೋರ್ಸ್‌ಗಳಿದ್ದು, ಇದರಲ್ಲಿ 32 ಕೋರ್ಸ್‌ಗಳನ್ನು ಹೊಸದಾಗಿ ಆರಂಭಿಸಲಾಗಿದೆ. 42 ಪಿಎಚ್.ಡಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ ಎಂದರು.

53 ಪೇಟೆಂಟ್‌ಗಳು, ಶೇ.92 ಬೋಧನಾ ಸಿಬ್ಬಂದಿಯು ಪಿಎಚ್.ಡಿ ಪದವಿ ಹೊಂದಿದ್ದಾರೆ. ಕಳೆದ 20 ವರ್ಷಗಳಿಂದ ಕಾಯಂ ಸಿಬ್ಬಂದಿ ಬೋಧನೆ, 5 ವರ್ಷಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚಿನ ಪಿ.ಎಚ್.ಡಿ. ಮಂಡನೆಯಾಗಿವೆ ಎಂದು ಹೇಳಿದರು.

136 ಕೋಟಿ ರೂ. ಸಂಶೋಧನಾ ಅನುದಾನ: ವಿವಿಯಲ್ಲಿ ಸಂಶೋಧನಾ ಚಟುವಟಿಕೆಗಳನ್ನು ಕೈಗೊಳ್ಳಲು ದೇಶದ ಪ್ರತಿಷ್ಠಿತ ಸಂಸ್ಥೆಗಳಾದ ಐಸಿಎಂಆರ್, ಐಸಿಎಸ್‌ಆರ್ ಸೇರಿ ವಿವಿಧ ಸಂಸ್ಥೆಗಳಿಂದ 136 ಕೋಟಿ ರೂ. ಸಂಶೋಧನಾ ಅನುದಾನ ಬಂದಿದೆ. ವಿವಿಧ ನಾಗರಿಕ ಸೇವೆ ಮತ್ತು ಪರಿಸರಕ್ಕೆ ಸಂಬಂಧಿಸಿದ ಕಾರ್ಯಕ್ಕೆ 4 ಕೋಟಿ ರೂ. ಅನುದಾನ ಬಂದಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿವಿ ಕುಲಸಚಿವ ಡಾ.ಸಿ. ಶ್ರೀನಿವಾಸ್, ವಿತ್ತಾಧಿಕಾರಿ ಅಜಿತ್‌ ಕುಮಾರ್ ಹೆಗಡೆ ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ…

13 mins ago

ಓದುಗರ ಪತ್ರ: ಬಸ್ ನಿರ್ವಾಹಕರು ಸೌಜನ್ಯದಿಂದ ವರ್ತಿಸಬೇಕು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ…

15 mins ago

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ…

17 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

38 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

3 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

3 hours ago