ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್ಮೆಂಟ್ ಎಫೆಕ್ಟಿವ್ನೆಸ್ ಎವಲ್ಯೂಷನ್ನಲ್ಲಿ ಬಂಡೀಪುರ ಉನ್ನತ ಅಂಕಗಳನ್ನು ಗಳಿಸಿ ಮತ್ತೊಮ್ಮೆ ಅತ್ಯುತ್ತಮ ಹುಲಿ ಸಂರಕ್ಷಿತ ವಲಯ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದಕ್ಕೆ ಬಂಡೀಪುರ ಸಿಎಫ್ ಡಾ.ರಮೇಶ್ ಕುಮಾರ್ ಅವರಿಗೆ ಎನ್ಟಿಸಿಎ ಅಧಿಕಾರಿಗಳು ಅಭಿನಂದನ ಪತ್ರ ನೀಡಿದ್ದಾರೆ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ತಜ್ಞರ ತಂಡವು 4 ವರ್ಷಗಳಿಗೊಮ್ಮೆ ನಿರ್ವಹಣೆಯ ಕುರಿತು ಮೌಲ್ಯಮಾಪನವನ್ನು ಮಾಡುತ್ತದೆ ಇದರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ವಲಯ ಶೇ.95.5ರಷ್ಟು ಅಂಕಗಳನ್ನು ಪಡೆದಿದೆ.
ಇದು ರಾಜ್ಯದಲ್ಲಿಯೇ ಅತ್ಯಧಿಕವಾಗಿದೆ ದೇಶದ ಇತರ ಹುಲಿ ಸಂರಕ್ಷಿತ ಪ್ರದೇಶಗಳು ಶೇ.94 ಗಳಿಸಿವೆ. ಬಂಡೀಪುರವನ್ನು ದೇಶದಲ್ಲಿ ಎರಡನೆಯ ಉತ್ತಮ ಹುಲಿ ಸಂರಕ್ಷಿತ ಪ್ರದೇಶವಾಗಿತ್ತು.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಿಂದ ಈ ಮೌಲ್ಯಮಾಪನವನ್ನು ಮಾಡಲಾಗಿದೆ
ವಿಜ್ಞಾನಿಗಳು ನಿವೃತ್ತ ಐಎಫ್ಎಸ್ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರ ತಂಡವು ಪ್ರತಿ 4 ವರ್ಷಗಳಿಗೊಮ್ಮೆ ಮೌಲ್ಯಮಾಪನ ನಡೆಸುತ್ತದೆ. ಹುಲಿ ಸಂರಕ್ಷಿತ ಪ್ರದೇಶದ ನಿರ್ವಹಣೆಯ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ.
ಬಂಡೀಪುರ ಹುಲಿ ಅಭಯಾರಣ್ಯದ ನಿರ್ವಹಣೆಯನ್ನು ಮುನ್ನಡೆಸುವಾಗ ಮಾಡಿದ ಯಶಸ್ಸು ಮತ್ತು ಪರಿಣಾಮಕಾರಿ ಸುಧಾರಣೆಗಾಗಿ ನಮ್ಮ ಕೃತಜ್ಞತಾಪೂರ್ವಕ ಧನ್ಯವಾದ ಮತ್ತು ನಿಮ್ಮ ಉತ್ತಮ ಪ್ರಯತ್ನಗಳು ಶ್ಲಾಘನೀಯ ಎಂದು ಇನ್ಸ್ಪೆಕ್ಟರ್ ಜನರಲ್ ಆಫ್ ಫಾರೆಸ್ಟ್ ಡಾ. ಅಮಿತ್ ಮಲ್ಲಿಕ್ ತಿಳಿಸಿದ್ದಾರೆ.
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…
ಬೆಂಗಳೂರು: ಯುವಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ, ಮೂರು ವರ್ಷ ಕಳೆಯತ್ತಾ ಬಂದರೂ ಒಂದೇ ಒಂದು…
ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಓ…
ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ…
ಬೆಂಗಳೂರು: ನಟ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್-1 ಚಿತ್ರದ ದೈವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ…
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.…