ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್ಮೆಂಟ್ ಎಫೆಕ್ಟಿವ್ನೆಸ್ ಎವಲ್ಯೂಷನ್ನಲ್ಲಿ ಬಂಡೀಪುರ ಉನ್ನತ ಅಂಕಗಳನ್ನು ಗಳಿಸಿ ಮತ್ತೊಮ್ಮೆ ಅತ್ಯುತ್ತಮ ಹುಲಿ ಸಂರಕ್ಷಿತ ವಲಯ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದಕ್ಕೆ ಬಂಡೀಪುರ ಸಿಎಫ್ ಡಾ.ರಮೇಶ್ ಕುಮಾರ್ ಅವರಿಗೆ ಎನ್ಟಿಸಿಎ ಅಧಿಕಾರಿಗಳು ಅಭಿನಂದನ ಪತ್ರ ನೀಡಿದ್ದಾರೆ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ತಜ್ಞರ ತಂಡವು 4 ವರ್ಷಗಳಿಗೊಮ್ಮೆ ನಿರ್ವಹಣೆಯ ಕುರಿತು ಮೌಲ್ಯಮಾಪನವನ್ನು ಮಾಡುತ್ತದೆ ಇದರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ವಲಯ ಶೇ.95.5ರಷ್ಟು ಅಂಕಗಳನ್ನು ಪಡೆದಿದೆ.
ಇದು ರಾಜ್ಯದಲ್ಲಿಯೇ ಅತ್ಯಧಿಕವಾಗಿದೆ ದೇಶದ ಇತರ ಹುಲಿ ಸಂರಕ್ಷಿತ ಪ್ರದೇಶಗಳು ಶೇ.94 ಗಳಿಸಿವೆ. ಬಂಡೀಪುರವನ್ನು ದೇಶದಲ್ಲಿ ಎರಡನೆಯ ಉತ್ತಮ ಹುಲಿ ಸಂರಕ್ಷಿತ ಪ್ರದೇಶವಾಗಿತ್ತು.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಿಂದ ಈ ಮೌಲ್ಯಮಾಪನವನ್ನು ಮಾಡಲಾಗಿದೆ
ವಿಜ್ಞಾನಿಗಳು ನಿವೃತ್ತ ಐಎಫ್ಎಸ್ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರ ತಂಡವು ಪ್ರತಿ 4 ವರ್ಷಗಳಿಗೊಮ್ಮೆ ಮೌಲ್ಯಮಾಪನ ನಡೆಸುತ್ತದೆ. ಹುಲಿ ಸಂರಕ್ಷಿತ ಪ್ರದೇಶದ ನಿರ್ವಹಣೆಯ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ.
ಬಂಡೀಪುರ ಹುಲಿ ಅಭಯಾರಣ್ಯದ ನಿರ್ವಹಣೆಯನ್ನು ಮುನ್ನಡೆಸುವಾಗ ಮಾಡಿದ ಯಶಸ್ಸು ಮತ್ತು ಪರಿಣಾಮಕಾರಿ ಸುಧಾರಣೆಗಾಗಿ ನಮ್ಮ ಕೃತಜ್ಞತಾಪೂರ್ವಕ ಧನ್ಯವಾದ ಮತ್ತು ನಿಮ್ಮ ಉತ್ತಮ ಪ್ರಯತ್ನಗಳು ಶ್ಲಾಘನೀಯ ಎಂದು ಇನ್ಸ್ಪೆಕ್ಟರ್ ಜನರಲ್ ಆಫ್ ಫಾರೆಸ್ಟ್ ಡಾ. ಅಮಿತ್ ಮಲ್ಲಿಕ್ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…