BREAKING NEWS

ಉತ್ತಮ ಹುಲಿ ಸಂರಕ್ಷಿತ ವಲಯ: ಬಂಡೀಪುರ ಅರಣ್ಯಕ್ಕೆ ಬಿರುದು

ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್‌ಮೆಂಟ್ ಎಫೆಕ್ಟಿವ್‌ನೆಸ್ ಎವಲ್ಯೂಷನ್‌ನಲ್ಲಿ ಬಂಡೀಪುರ ಉನ್ನತ ಅಂಕಗಳನ್ನು ಗಳಿಸಿ ಮತ್ತೊಮ್ಮೆ ಅತ್ಯುತ್ತಮ ಹುಲಿ ಸಂರಕ್ಷಿತ ವಲಯ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದಕ್ಕೆ ಬಂಡೀಪುರ ಸಿಎಫ್ ಡಾ.ರಮೇಶ್ ಕುಮಾರ್ ಅವರಿಗೆ ಎನ್‌ಟಿಸಿಎ ಅಧಿಕಾರಿಗಳು ಅಭಿನಂದನ ಪತ್ರ ನೀಡಿದ್ದಾರೆ

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ತಜ್ಞರ ತಂಡವು 4 ವರ್ಷಗಳಿಗೊಮ್ಮೆ ನಿರ್ವಹಣೆಯ ಕುರಿತು ಮೌಲ್ಯಮಾಪನವನ್ನು ಮಾಡುತ್ತದೆ ಇದರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ವಲಯ ಶೇ.95.5ರಷ್ಟು ಅಂಕಗಳನ್ನು ಪಡೆದಿದೆ.

ಇದು ರಾಜ್ಯದಲ್ಲಿಯೇ ಅತ್ಯಧಿಕವಾಗಿದೆ ದೇಶದ ಇತರ ಹುಲಿ ಸಂರಕ್ಷಿತ ಪ್ರದೇಶಗಳು ಶೇ.94 ಗಳಿಸಿವೆ. ಬಂಡೀಪುರವನ್ನು ದೇಶದಲ್ಲಿ ಎರಡನೆಯ ಉತ್ತಮ ಹುಲಿ ಸಂರಕ್ಷಿತ ಪ್ರದೇಶವಾಗಿತ್ತು.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಿಂದ ಈ ಮೌಲ್ಯಮಾಪನವನ್ನು ಮಾಡಲಾಗಿದೆ

ವಿಜ್ಞಾನಿಗಳು ನಿವೃತ್ತ ಐಎಫ್‌ಎಸ್ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರ ತಂಡವು ಪ್ರತಿ 4 ವರ್ಷಗಳಿಗೊಮ್ಮೆ ಮೌಲ್ಯಮಾಪನ ನಡೆಸುತ್ತದೆ. ಹುಲಿ ಸಂರಕ್ಷಿತ ಪ್ರದೇಶದ ನಿರ್ವಹಣೆಯ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ.

ಬಂಡೀಪುರ ಹುಲಿ ಅಭಯಾರಣ್ಯದ ನಿರ್ವಹಣೆಯನ್ನು ಮುನ್ನಡೆಸುವಾಗ ಮಾಡಿದ ಯಶಸ್ಸು ಮತ್ತು ಪರಿಣಾಮಕಾರಿ ಸುಧಾರಣೆಗಾಗಿ ನಮ್ಮ ಕೃತಜ್ಞತಾಪೂರ್ವಕ ಧನ್ಯವಾದ ಮತ್ತು ನಿಮ್ಮ ಉತ್ತಮ ಪ್ರಯತ್ನಗಳು ಶ್ಲಾಘನೀಯ ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಫಾರೆಸ್ಟ್‌ ಡಾ. ಅಮಿತ್‌ ಮಲ್ಲಿಕ್ ತಿಳಿಸಿದ್ದಾರೆ.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

6 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

6 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

6 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

8 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

10 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

11 hours ago