ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್ಮೆಂಟ್ ಎಫೆಕ್ಟಿವ್ನೆಸ್ ಎವಲ್ಯೂಷನ್ನಲ್ಲಿ ಬಂಡೀಪುರ ಉನ್ನತ ಅಂಕಗಳನ್ನು ಗಳಿಸಿ ಮತ್ತೊಮ್ಮೆ ಅತ್ಯುತ್ತಮ ಹುಲಿ ಸಂರಕ್ಷಿತ ವಲಯ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದಕ್ಕೆ ಬಂಡೀಪುರ ಸಿಎಫ್ ಡಾ.ರಮೇಶ್ ಕುಮಾರ್ ಅವರಿಗೆ ಎನ್ಟಿಸಿಎ ಅಧಿಕಾರಿಗಳು ಅಭಿನಂದನ ಪತ್ರ ನೀಡಿದ್ದಾರೆ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ತಜ್ಞರ ತಂಡವು 4 ವರ್ಷಗಳಿಗೊಮ್ಮೆ ನಿರ್ವಹಣೆಯ ಕುರಿತು ಮೌಲ್ಯಮಾಪನವನ್ನು ಮಾಡುತ್ತದೆ ಇದರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ವಲಯ ಶೇ.95.5ರಷ್ಟು ಅಂಕಗಳನ್ನು ಪಡೆದಿದೆ.
ಇದು ರಾಜ್ಯದಲ್ಲಿಯೇ ಅತ್ಯಧಿಕವಾಗಿದೆ ದೇಶದ ಇತರ ಹುಲಿ ಸಂರಕ್ಷಿತ ಪ್ರದೇಶಗಳು ಶೇ.94 ಗಳಿಸಿವೆ. ಬಂಡೀಪುರವನ್ನು ದೇಶದಲ್ಲಿ ಎರಡನೆಯ ಉತ್ತಮ ಹುಲಿ ಸಂರಕ್ಷಿತ ಪ್ರದೇಶವಾಗಿತ್ತು.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಿಂದ ಈ ಮೌಲ್ಯಮಾಪನವನ್ನು ಮಾಡಲಾಗಿದೆ
ವಿಜ್ಞಾನಿಗಳು ನಿವೃತ್ತ ಐಎಫ್ಎಸ್ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರ ತಂಡವು ಪ್ರತಿ 4 ವರ್ಷಗಳಿಗೊಮ್ಮೆ ಮೌಲ್ಯಮಾಪನ ನಡೆಸುತ್ತದೆ. ಹುಲಿ ಸಂರಕ್ಷಿತ ಪ್ರದೇಶದ ನಿರ್ವಹಣೆಯ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ.
ಬಂಡೀಪುರ ಹುಲಿ ಅಭಯಾರಣ್ಯದ ನಿರ್ವಹಣೆಯನ್ನು ಮುನ್ನಡೆಸುವಾಗ ಮಾಡಿದ ಯಶಸ್ಸು ಮತ್ತು ಪರಿಣಾಮಕಾರಿ ಸುಧಾರಣೆಗಾಗಿ ನಮ್ಮ ಕೃತಜ್ಞತಾಪೂರ್ವಕ ಧನ್ಯವಾದ ಮತ್ತು ನಿಮ್ಮ ಉತ್ತಮ ಪ್ರಯತ್ನಗಳು ಶ್ಲಾಘನೀಯ ಎಂದು ಇನ್ಸ್ಪೆಕ್ಟರ್ ಜನರಲ್ ಆಫ್ ಫಾರೆಸ್ಟ್ ಡಾ. ಅಮಿತ್ ಮಲ್ಲಿಕ್ ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…