ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 2ನೇ ಹಂತದ ಭಾರತ್ ಜೋಡೋ ಪಾದಯಾತ್ರೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಗುಜರಾತ್ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ.
ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಖಚಿತಪಡಿಸಿದ್ದು, ರಾಹುಲ್ ಗಾಂಧಿ ಅವರು ಗುಜರಾತ್ನಿಂದ ಮೇಘಾಲಯದವರೆಗೆ ಎರಡನೇ ಹಂತದ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ. ಪ್ರಮುಖ ಕಾಂಗ್ರೆಸ್ ನಾಯಕರು ಪಶ್ಚಿಮ ರಾಜ್ಯದ ವಿವಿಧ ಭಾಗಗಳಲ್ಲಿ ಮೆರವಣಿಗೆಯನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ಆದಾಗ್ಯೂ, ಹೊಸ ಮಾರ್ಗ ಮತ್ತು ಅನುಗುಣವಾದ ದಿನಾಂಕಗಳ ಬಗ್ಗೆ ವಿವರಗಳು ಇಲ್ಲಿಯವರೆಗೆ ದೃಢೀಕರಿಸಲ್ಪಟ್ಟಿಲ್ಲ.
ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿದ್ದ ಭಾರತ್ ಜೋಡೊ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿತ್ತು. ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯು 3,970 ಕಿಮೀ, 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕ್ರಮಿಸಿ 130 ದಿನಗಳಿಗಿಂತ ಹೆಚ್ಚು ಕಾಲ ನಡೆದ ನಂತರ ಶ್ರೀನಗರದಲ್ಲಿ ಜನವರಿ 30 ರಂದು ಮುಕ್ತಾಯಗೊಂಡಿತು. ಈಗ ಎರಡನೇ ಹಂತದಲ್ಲಿ ಗುಜರಾತ್ನಿಂದ ಮೇಘಾಲಯಕ್ಕೆ ಯಾತ್ರೆ ಹಮ್ಮಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಸುಮಾರು 4,000 ಕಿ.ಮೀ. ಪಾದಯಾತ್ರೆ ನಡೆಸಿದ್ದರು. 2022 ಸೆಪ್ಟೆಂಬರ್ 7ರಂದು ಆರಂಭವಾದ ಯಾತ್ರೆಯು ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯಗೊಂಡಿತ್ತು. 130 ದಿನಗಳ ಕಾಲ 12 ರಾಜ್ಯಗಳಲ್ಲಿ ಯಾತ್ರೆ ಸಾಗಿತ್ತು.
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…