BREAKING NEWS

ಭಾರತ್ ಜೋಡೋ ಭಾಗ-2: ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 2ನೇ ಹಂತದ ಭಾರತ್ ಜೋಡೋ ಪಾದಯಾತ್ರೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ.

ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಖಚಿತಪಡಿಸಿದ್ದು, ರಾಹುಲ್ ಗಾಂಧಿ ಅವರು ಗುಜರಾತ್‌ನಿಂದ ಮೇಘಾಲಯದವರೆಗೆ ಎರಡನೇ ಹಂತದ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ. ಪ್ರಮುಖ ಕಾಂಗ್ರೆಸ್ ನಾಯಕರು ಪಶ್ಚಿಮ ರಾಜ್ಯದ ವಿವಿಧ ಭಾಗಗಳಲ್ಲಿ ಮೆರವಣಿಗೆಯನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಆದಾಗ್ಯೂ, ಹೊಸ ಮಾರ್ಗ ಮತ್ತು ಅನುಗುಣವಾದ ದಿನಾಂಕಗಳ ಬಗ್ಗೆ ವಿವರಗಳು ಇಲ್ಲಿಯವರೆಗೆ ದೃಢೀಕರಿಸಲ್ಪಟ್ಟಿಲ್ಲ.

ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿದ್ದ ಭಾರತ್ ಜೋಡೊ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿತ್ತು. ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯು 3,970 ಕಿಮೀ, 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕ್ರಮಿಸಿ 130 ದಿನಗಳಿಗಿಂತ ಹೆಚ್ಚು ಕಾಲ ನಡೆದ ನಂತರ ಶ್ರೀನಗರದಲ್ಲಿ ಜನವರಿ 30 ರಂದು ಮುಕ್ತಾಯಗೊಂಡಿತು. ಈಗ ಎರಡನೇ ಹಂತದಲ್ಲಿ ಗುಜರಾತ್‌ನಿಂದ ಮೇಘಾಲಯಕ್ಕೆ ಯಾತ್ರೆ ಹಮ್ಮಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಸುಮಾರು 4,000 ಕಿ.ಮೀ. ಪಾದಯಾತ್ರೆ ನಡೆಸಿದ್ದರು. 2022 ಸೆಪ್ಟೆಂಬರ್ 7ರಂದು ಆರಂಭವಾದ ಯಾತ್ರೆಯು ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯಗೊಂಡಿತ್ತು. 130 ದಿನಗಳ ಕಾಲ 12 ರಾಜ್ಯಗಳಲ್ಲಿ ಯಾತ್ರೆ ಸಾಗಿತ್ತು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

35 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

36 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

39 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

40 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

48 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

55 mins ago