BREAKING NEWS

ಭವಾನಿ ರೇವಣ್ಣ ಕಾರು ಅಪಘಾತ : ನನ್ನ ತಾಯಿಯ ತಪ್ಪೇನು ಇಲ್ಲ ಎಂದ ಸೂರಜ್‌ ರೇವಣ್ಣ

ಬೆಳಗಾವಿ : ಭವಾನಿ ರೇವಣ್ಣ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸೂರಜ್‌ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಇದರಲ್ಲಿ ನನ್ನ ತಾಯಿಯ ತಪ್ಪೇನಿಲ್ಲ ಬೈಕ್ ಸವಾರ ಕುಡಿದು ಬೈಕ್‌ ಚಲಾಯಿಸುತ್ತಿದ್ದ. ಕಾರು ಅಪಘಾತವಾಗಿದ್ದಕ್ಕೆ ಸಹಜವಾಗಿಯೇ ನನ್ನ ತಾಯಿ ಆ ರೀತಿ ಮಾತನಾಡಿದ್ದಾರೆ. ಅವರು ಆ ರೀತಿಯ ಬದಗಳನ್ನು ಬಳಸಿರುವುದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ. ಅಪಘಾತ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾರೋ ಕಿಡಿಗೇಡಿಗಳು ವಿಡಿಯೋ ಮಾಡಿಕೊಂಡು ವೈರಲ್‌ ಮಾಡಿದ್ದಾರೆ ಎಂದಿದ್ದಾರೆ.

ನೆನ್ನೆ ಕೆಆರ್‌ ನಗರದ ಸಾಲಿಗ್ರಾಮದಿಂದ ಹೊಳೆ ನರಸಿಪುರದ ಕಡೆಗೆ ಹೊರಟಿದ್ದ ವೇಳೆ ರಾಮಪುರ ಗೇಟ್‌ ಬಳಿ ಭವಾನಿ ರೇವಣ್ಣ ಅವರ ಕಾರಿಗೆ ಎದುರಿನಿಂದ ಬಂದ ಬೈಕ್‌ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗ ಸ್ವಲ್ಪ ಸ್ಕ್ಯಾಚ್‌ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಬೈಕ್‌ ಸವಾರನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ಸಾಯುವ ಹಾಗಿದ್ದರೆ ಬಸ್ಸಿಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನೀನು ಸಾಯೋಕೆ ನನ್ನ ಕಾರೇ ಬೇಕಿತ್ತಾ ? ಡ್ಯಾಮೆಜ್‌ ಮಾಡೋಕೆ ನೀನ್ಯಾವೊನು. ಅವನು ಸತ್ರೆ ಸಾಯಲಿ. ನನ್ನ ಗಾಡಿ ಯಾರು ರಿಪೇರಿ ಮಾಡಿಸಿಕೊಡ್ತಾರೆ. ಈಗ ರಿಪೇರಿ ಮಾಡಿಸೋಕೆ ಐವತ್ತು ಲಕ್ಷ ಬೇಕು. ಒಂದುವರೆ ಕೋಟಿ ರೂಪಯಿಯ ಕಾರು ನನ್ನದು, ಅವನ ಗಾಡಿ ಸುಟ್ಟುಹಾಕಿ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು.

ಈ ವೇಳೆ ಸ್ಥಳದಲ್ಲಿದ್ದವರು ಅಕ್ಕ ಗಾಡಿ ತೆಗೀರಿ ಹೋಗೋಣ ಎಂದಿದ್ದಾರೆ. ಇದಕ್ಕೆ ಭವಾನಿ ರೇವಣ್ಣ ಅವರು ಗಾಡಿ ತಗೊಂಡು ಏನ್‌ ಮಾಡೋಣ ರೀಪೇರಿ ಮಾಡೋಕೆ ಐವತ್ತು ಲಕ್ಷ ಬೇಕು ಕೊಡ್ತೀಯಾ ನೀನು ? ದುಡ್ಡು ಕೊಡುವ ಹಾಗಿದ್ದರೆ ನ್ಯಾನ ಮಾಡೋಕೆ ಬನ್ನಿ ಎಂದು ಸಂಯಮ ಮೀರಿ ಮಾತನಾಡಿದ್ದರು.

lokesh

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago