Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

ಬೀದರ್: ಕಾಂಗ್ರೆಸ್ ಸೇರಿದ ಸಂಜಯ್ ಖೇಣಿ

ಬೀದರ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಸಂಜಯ್ ಖೇಣಿ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದರು.
ನಗರದ ರಾಂಪುರೆ ಕಾಲೊನಿಯ ಬೀದರ್ ದಕ್ಷಿಣ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಅಶೋಕ ಖೇಣಿ ನಿವಾಸದಲ್ಲಿ ಅವರು ಪಕ್ಷ ಸೇರಿದರು.

ಅಶೋಕ ಖೇಣಿ ಅವರ ನಿವಾಸಕ್ಕೆ ನೂರಾರು ಕಾರ್ಯಕರ್ತರೊಂದಿಗೆ ಬಂದ ಅವರನ್ನು ಪಟಾಕಿ ಸಿಡಿಸಿ ಬರಮಾಡಿಕೊಳ್ಳಲಾಯಿತು. ಅಶೋಕ ಖೇಣಿ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಸಂಜಯ್ ಖೇಣಿ ಅವರು 2013 ರ ವಿಧಾನಸಭೆ ಚುನಾವಣೆಯಲ್ಲಿ ಅಶೋಕ ಖೇಣಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಾಬುರಾವ್ ತುಂಬಾ, ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಚನಶೆಟ್ಟಿ, ಕರೀಂಸಾಬ ಕಮಠಾಣ, ಲೋಕೇಶ ಕನಶೆಟ್ಟಿ ಮೊದಲಾದವರು ಇದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!