BREAKING NEWS

ಬೀದರ್: ಕಾಂಗ್ರೆಸ್ ಸೇರಿದ ಸಂಜಯ್ ಖೇಣಿ

ಬೀದರ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಸಂಜಯ್ ಖೇಣಿ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದರು.
ನಗರದ ರಾಂಪುರೆ ಕಾಲೊನಿಯ ಬೀದರ್ ದಕ್ಷಿಣ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಅಶೋಕ ಖೇಣಿ ನಿವಾಸದಲ್ಲಿ ಅವರು ಪಕ್ಷ ಸೇರಿದರು.

ಅಶೋಕ ಖೇಣಿ ಅವರ ನಿವಾಸಕ್ಕೆ ನೂರಾರು ಕಾರ್ಯಕರ್ತರೊಂದಿಗೆ ಬಂದ ಅವರನ್ನು ಪಟಾಕಿ ಸಿಡಿಸಿ ಬರಮಾಡಿಕೊಳ್ಳಲಾಯಿತು. ಅಶೋಕ ಖೇಣಿ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಸಂಜಯ್ ಖೇಣಿ ಅವರು 2013 ರ ವಿಧಾನಸಭೆ ಚುನಾವಣೆಯಲ್ಲಿ ಅಶೋಕ ಖೇಣಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಾಬುರಾವ್ ತುಂಬಾ, ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಚನಶೆಟ್ಟಿ, ಕರೀಂಸಾಬ ಕಮಠಾಣ, ಲೋಕೇಶ ಕನಶೆಟ್ಟಿ ಮೊದಲಾದವರು ಇದ್ದರು.

andolanait

Recent Posts

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

28 mins ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

52 mins ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

1 hour ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

2 hours ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

2 hours ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago